Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:21 - ಕನ್ನಡ ಸತ್ಯವೇದವು J.V. (BSI)

21 ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಈ ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕ್ರಿಸ್ತ್ ಸರ್ಗಾತ್ಲ್ಯಾ ಸಗ್ಳ್ಯಾ ಮೊಟೆಪಾನಾಂಚ್ಯಾ, ಅಧಿಕಾರಿಯಾಂಚ್ಯಾ, ಪದ್ವಿಚ್ಯಾ ಅನಿ ಧನಿಯಾಂಚ್ಯಾ ವೈರ್ ಅಧಿಕಾರ್ ಚಾಲ್ವುತಾ; ಹ್ಯಾ ಜಗಾತ್ಲ್ಯಾ ಅನಿ ಫಿಡೆ ಯೆತಲ್ಯಾ ಸಗ್ಳ್ಯಾ ಅಧಿಕಾರಾಂಚ್ಯಾ ವೈರ್ ಮೊಟೆ ನಾವ್ ತೆಕಾ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:21
20 ತಿಳಿವುಗಳ ಹೋಲಿಕೆ  

ಮತ್ತು ನೀವು ಆತನಲ್ಲಿದ್ದುಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಈತನು ದೇವದೂತರಿಗಿಂತಲೂ ಉತ್ತಮನಾದನು; ಅವರಿಗಿಂತ ಶ್ರೇಷ್ಠವಾದ ಹೆಸರನ್ನು ಹೊಂದಿದನಲ್ಲಾ; ಹೇಗಂದರೆ -


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ಆತನು ದೊರೆತನಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಜಯೋತ್ಸವ ಮಾಡುತ್ತಾನೋ ಎಂಬಂತೆ ಶಿಲುಬೆಯ ಮೇಲೆ ಅವುಗಳನ್ನು ಜಯಿಸಲ್ಪಟ್ಟವುಗಳನ್ನಾಗಿ ಮೆರಸುತ್ತಾ ತೋರಿಸಿದನು.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅದು ಅವನಿಗೆ ಕ್ಷವಿುಸಲ್ಪಡುವದು; ಪವಿತ್ರಾತ್ಮನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಕ್ಷವಿುಸಲ್ಪಡುವದಿಲ್ಲ.


ನಾವು ಪ್ರಸ್ತಾಪಿಸುವ ಮುಂದಣ ಸಾಮ್ರಾಜ್ಯವನ್ನು ಆತನು ದೇವದೂತರಿಗೆ ಅಧೀನ ಮಾಡಲಿಲ್ಲವಲ್ಲಾ.


ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು