Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:15 - ಕನ್ನಡ ಸತ್ಯವೇದವು J.V. (BSI)

15 ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೊ ಜುದೆವಾಂಚೆ ಖಾಯ್ದೆ ಅನಿ ನಿಯಮಾಕ್ನಿ ಕಡೆಕ್ ಕರ್ತಾ, ಅಸೆ ಅಪ್ನಾಚ್ಯಾ ಎಕ್ವಟ್ಟಾ ವೈನಾ ದೊನ್ ರಿತಿಚ್ಯಾ ಲೊಕಾಂಚ್ಯಾ ಮದ್ದಿ ಸಮಾಧಾನ್ ಹಾನುನ್ ಎಕ್ ನ್ಹವಿ ಲೊಕಾ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:15
21 ತಿಳಿವುಗಳ ಹೋಲಿಕೆ  

ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.


ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.


ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ.


ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.


ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯ ಕಲ್ಪಿತ ಆಜ್ಞೆಗಳನ್ನೂ ಉಪದೇಶಗಳನ್ನೂ ಅನುಸರಿಸಿ -


ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಆತನೇ ಶಿರಸ್ಸು; ದೇಹವೆಲ್ಲಾ ಆತನ ದೊರೆತನದಲ್ಲಿದ್ದು ತನ್ನಲ್ಲಿರುವ ಎಲ್ಲಾ ನರಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯ ಹೊಂದಿ ಪ್ರೀತಿಯಿಂದ ಐಕ್ಯವಾಗಿದ್ದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಪರಲೋಕವಸ್ತುಗಳಿಗೆ ಪ್ರತಿರೂಪವಾಗಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಸಾಕ್ಷಾತ್ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು.


ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನಪಡಿಸಿದ್ದಾನೆ.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ಕ್ರಿಸ್ತನಿಂದಾದ ಸಮಾಧಾನವು ನಿಮ್ಮ ಹೃದಯಗಳಲ್ಲಿ ಯಜಮಾನನಂತಿದ್ದು ತೀರ್ಪುಹೇಳಲಿ; ನೀವು ಒಂದೇ ದೇಹಕ್ಕೆ ಸೇರಿದವರಾದದರಿಂದ ಸಮಾಧಾನದಿಂದಿರುವದಕ್ಕಾಗಿ ಕರೆಯಲ್ಪಟ್ಟಿರಿ. ಇದಲ್ಲದೆ ಕೃತಜ್ಞತೆಯುಳ್ಳವರಾಗಿರ್ರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು