Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:17 - ಕನ್ನಡ ಸತ್ಯವೇದವು J.V. (BSI)

17 ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ವಿಶ್ವಾಸಾಚ್ಯಾ ವೈನಾ ಕ್ರಿಸ್ತ್ ತುಮ್ಚ್ಯಾ ಮನಾಕ್ನಿ ಅಪ್ನಾಚೆ ಘರ್ ಕರುನ್ಗೆಂವ್ದಿತ್ ಮನುನ್ ಮಾಗ್ತಾ ಅನಿ ತುಮ್ಚೆ ಮುಳಾ ಅನಿ ಪಾಯಾ ಪ್ರೆಮಾ ವೈರ್ ಭಾಂದಲಿ ಹೊವ್ನ್ ರ್‍ಹಾಂವ್ದಿತ್ ಮನುನ್ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:17
24 ತಿಳಿವುಗಳ ಹೋಲಿಕೆ  

ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.


ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ; ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ಅವನು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು; ಹೊಳೆಬಂದು ಪ್ರವಾಹವು ಆ ಮನೆಗೆ ಬಡಿದಾಗ್ಯೂ ಅದು ಚೆನ್ನಾಗಿ ಕಟ್ಟಿದ್ದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.


ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದ ಕಾರಣ ಒಣಗಿಹೋದವು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ಇರುತ್ತಾನೆ; ನಾನು ಅವನಲ್ಲಿ ಇರುತ್ತೇನೆ.


ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋಸನು ನೀರು ಹೊಯಿದನು, ಆದರೆ ಬೆಳೆಸುತ್ತಾ ಬಂದವನು ದೇವರು.


ಕ್ರಿಸ್ತನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬದು ನಿಮ್ಮನ್ನು ಕುರಿತು ನಿಮಗೆ ಚೆನ್ನಾಗಿ ತಿಳಿಯುವದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು