Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:5 - ಕನ್ನಡ ಸತ್ಯವೇದವು J.V. (BSI)

5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಿಂದಿನ ಕಾಲಗಳಲ್ಲಿದ್ದ ಜನರಿಗೆ ಆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ಆ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಫಾಟಿ ಮಾನ್ಸಾಕ್ನಿ ಹ್ಯೊ ಗುಟ್ ಸಾಂಗುನ್ ಹೊವ್ಕ್ ನಾ, ಖರೆ ದೆವಾನ್ ಅತ್ತಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅಪ್ನಾಚ್ಯಾ ಪವಿತ್ರ್ ಅಪೊಸ್ತಲಾಕ್ನಿ ಅನಿ ಪ್ರವಾದಿಯಾಕ್ನಿ ದಾಕ್ವುನ್ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:5
24 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.


ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವರಿಗೆ - ಯೆಹೂದ್ಯರು ಅನ್ಯಜನರ ಕೂಡ ಹೊಕ್ಕು ಬಳಿಕೆಮಾಡುವದು ಯೆಹೂದ್ಯರ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರದೆಂದು ದೇವರು ತೋರಿಸಿದ್ದಾನೆ.


ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಿಲ್ಲ ಎಂಬದಾಗಿ ನಿಮಗೆ ಹೇಳುತ್ತೇನೆ ಅಂದನು.


ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ ಸತ್ಪುರುಷರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ; ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಿಲ್ಲ.


ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಆದದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.


ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು