Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:10 - ಕನ್ನಡ ಸತ್ಯವೇದವು J.V. (BSI)

10 ಇಳಿದು ಬಂದವನು ಮೇಲಣ ಎಲ್ಲಾ ಲೋಕಗಳಿಗಿಂತ ಉನ್ನತವಾಗಿ ಏರಿಹೋದವನೇ. ಆದದರಿಂದ ಸಮಸ್ತ ಲೋಕಗಳನ್ನು ತುಂಬಿದವನಾದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಳಿದು ಬಂದಿದ್ದಾತನೇ ಲೋಕಗಳಿಗೆಲ್ಲ ಮೇಲೇರಿಹೋಗಿದ್ದಾನೆ. ತನ್ನ ಪ್ರಸನ್ನತೆಯಿಂದ ಇಡೀ ಜಗತ್ತನ್ನೇ ಆವರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಭೂಮಿಯ ಅಧೋಭಾಗಕ್ಕೆ ಇಳಿದುಹೋಗಿ, ಅಲ್ಲಿಂದ ಆಕಾಶದ ಅತ್ಯುನ್ನತಸ್ಥಾನಕ್ಕೆ ಏರಿಹೋದನು ಎಂದರ್ಥ. ಸಮಸ್ತದಲ್ಲಿ ತಾನೇ ತುಂಬಿರಬೇಕೆಂದು ಕ್ರಿಸ್ತನು ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಳಿದು ಬಂದ ಅವರೇ ಮೇಲಣ ಎಲ್ಲಾ ಆಕಾಶಗಳಿಗಿಂತ ಉನ್ನತವಾಗಿ ಏರಿಹೋಗಿ, ಇಡೀ ವಿಶ್ವವನ್ನೇ ತುಂಬಿಕೊಳ್ಳುವುದಕ್ಕಾಗಿ ಮೇಲೆ ಏರಿ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಚ್ಯಾ ಸಾಟ್ನಿ ಆಕಾಶ್ ಮಂಡಳಾಚ್ಯಾ ವೈರ್ ಸಗ್ಳ್ಯಾಕ್ಡೆ ಅಪ್ನಾಚೆ ಹಾಜಿರ್ಪಾನ್ ಭರುಕ್ ಸಾಟ್ನಿ ಉತ್ರುನ್ ಎಲ್ಲೊಚ್ ವೈರ್ ಚಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:10
24 ತಿಳಿವುಗಳ ಹೋಲಿಕೆ  

ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ಕ್ರಿಸ್ತನಲ್ಲಿಯೇ ದೇವರ ಸರ್ವಸಂಪೂರ್ಣತೆಯು ಅವತರಿಸಿ ವಾಸಮಾಡುತ್ತದೆ,


ತಂದೆಯಾದ ದೇವರು ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ


ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಜ್ಞಾನಕ್ಕೆ ಮೀರುವ ಕ್ರಿಸ್ತನ ಪ್ರೀತಿಯನ್ನು ತಿಳುಕೊಳ್ಳಲೂ ಪೂರ್ಣಶಕ್ತರಾಗಿದ್ದು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.


ಈ ಮಾತುಗಳನ್ನು ಹೇಳಿದ ಬಳಿಕ ಅವರು ನೋಡುತ್ತಾ ಇದ್ದ ಹಾಗೆ ಆತನು ಏರಿಸಲ್ಪಟ್ಟನು; ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರ ಕಣ್ಣಿಗೆ ಮರೆಯಾದನು.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನಂದರೆ - ಪರಲೋಕದೊಳಗೆ ಮಹತ್ವವುಳ್ಳ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ಆದರೆ ದೇವರು ತಾನು ನೇವಿುಸಿದ ಕ್ರಿಸ್ತನು ಬಾಧೆಯನ್ನನುಭವಿಸಿ ಸಾಯಬೇಕೆಂಬದಾಗಿ ಎಲ್ಲಾ ಪ್ರವಾದಿಗಳ ಬಾಯಿಂದ ಮುಂಚಿತವಾಗಿ ಹೇಳಿಸಿದ ಮಾತನ್ನು ಹೀಗೆ ನೆರವೇರಿಸಿದನು.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ


ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಕ್ಕೆ ಸೇರಿಸಲ್ಪಟ್ಟಿರುವ ಈ ಯೇಸು ಯಾವ ರೀತಿಯಲ್ಲಿ ಆಕಾಶದೊಳಕ್ಕೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.


ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು;


ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು.


ಅದನ್ನು ನೋಡಿ ಅವರು - ನಾವು ಇದನ್ನು ಹರಿಯಬಾರದು; ಚೀಟುಹಾಕಿ ಇದು ಯಾರಿಗೆ ಬರುವದೋ ನೋಡೋಣ ಎಂದು ಮಾತಾಡಿಕೊಂಡರು. ಇದರಿಂದ - ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು, ನನ್ನ ಅಂಗಿಗೋಸ್ಕರ ಚೀಟು ಹಾಕಿದರು ಎಂಬ ಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.


ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೆಯ ಆಕಾಶದ ಪರಿಯಂತರಕ್ಕೂ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆ, ದೇವರೇ ಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು