Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:25 - ಕನ್ನಡ ಸತ್ಯವೇದವು J.V. (BSI)

25 ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆ ಹೊವ್ನ್, ತುಮಿ ಝುಟೆ ಸಾಂಗಿನಸ್ತಾನಾ ಎಕಾಮೆಕಾಕ್ ಕನ್ನಾಬಿ ಖರೆಚ್ ಬೊಲುನ್ಗೆತ್ ರಾವಾ, ಕಶ್ಯಾಕ್ ಮಟ್ಲ್ಯಾರ್ ಅಮಿ ಸಗ್ಳ್ಯೆಬಿ ಎಕುಚ್ ಆಂಗಾಚಿ ಭಾಗಾ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:25
42 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಪೂರ್ವಸ್ವಭಾವವನ್ನು ಅದರ ಕೃತ್ಯಗಳ ಕೂಡ ತೆಗೆದಿಟ್ಟು ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.


ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ;


ಸುಳ್ಳುತುಟಿ ಯೆಹೋವನಿಗೆ ಹೇಸು; ಸತ್ಯವಂತರು ಆತನಿಗೆ ಲೇಸು.


ಹಾಗೆಯೇ ನಾವೆಲ್ಲರು ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ಪರಸ್ಪರ ಅಂಗಗಳಾಗಿದ್ದೇವೆ.


ಪ್ರೀತಿಯಿಂದ ಸತ್ಯವನ್ನನುಸರಿಸುತ್ತಾ ಬೆಳೆದು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ಐಕ್ಯವನ್ನು ಹೊಂದುತ್ತಾ ಬರಬೇಕು.


ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು; ಸುಳ್ಳು ಸಾಕ್ಷಿಯು ಅಸತ್ಯಮಾಡುವನು.


ನನ್ನ ಬಾಯಿ ಸತ್ಯವನ್ನೇ ಆಡುವದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ.


ಸತ್ಯದ ತುಟಿ ಶಾಶ್ವತ; ಸುಳ್ಳಿನ ನಾಲಿಗೆ ಕ್ಷಣಿಕ.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಸುಳ್ಳುಬೋಧಕರು ಬಂದು ಸ್ವಂತ ಮನಸ್ಸಿನಲ್ಲಿ ಅಪರಾಧಿಗಳೆಂಬ ಬರೆಯುಳ್ಳವರಾದರೂ ತಾವು ನೀತಿವಂತರೆಂದು ತೋರ್ಪಡಿಸಿಕೊಂಡು


ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೂ ಸತ್ಯವೆಂದು ಕಂಡುಬಂದವು.


ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಸೋಮಾರಿಗಳಾದ ಹೊಟ್ಟೇಬಾಕರೂ ಆಗಿದ್ದಾರೆಂದು ಅವರಲ್ಲಿಯೇ ಹುಟ್ಟಿದ ಒಬ್ಬ ಪ್ರವಾದಿಯು ಹೇಳಿದನು. ಈ ಸಾಕ್ಷಿಯು ನಿಜವೇ.


ರೊಟ್ಟಿಯು ಒಂದೇಯಾಗಿರುವದರಿಂದ ಅನೇಕರಾಗಿರುವ ನಾವು ಒಂದೇ ದೇಹದಂತಿದ್ದೇವೆ; ಯಾಕಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುತಕ್ಕೊಂಡು ತಿನ್ನುತ್ತೇವೆ.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


(ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ).


ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ [ನಾಶಕರ].


ಯಾವವಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷರಕ್ತವನ್ನು ಸುರಿಸುವ ಕೈ,


ವಿುಥ್ಯಾಮಾರ್ಗವನ್ನು ನನಗೆ ದೂರಮಾಡು; ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.


ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಸುಳ್ಳನ್ನು ಸ್ಥಾಪಿಸುವದೇ ನಿನಗೆ ಸಂತೋಷ. ಸೆಲಾ.


ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.


ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.


ನಿರಪರಾಧಿಯಾಗಿಯೂ ಸನ್ಮಾರ್ಗಸ್ಥನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇ ಬಾರದು; ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ಶಿಕ್ಷೆಯನ್ನು ವಿಧಿಸದೆ ಬಿಡುವದಿಲ್ಲ.


ಅವನು ಸಜ್ಜನನೂ ನೀತಿವಂತನೂ ಮನಃಪೂರ್ವಕವಾಗಿ ಸತ್ಯವಚನವನ್ನಾಡುವವನೂ ಆಗಿರಬೇಕು.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ಮಾತಿನಿಂದ ಮೋಸಮಾಡುವಿಯಾ?


ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು.


ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ಈಗಲಾದರೋ ಕ್ರೋಧ ಕೋಪ ಮತ್ಸರ ದೂಷಣೆ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.


ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ


ಅವನು ಅವಳಿಗೆ - ಯಾವದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು