Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:7 - ಕನ್ನಡ ಸತ್ಯವೇದವು J.V. (BSI)

7 ಆದರೆ ಕ್ರಿಸ್ತನು ನಮ್ಮಲ್ಲಿ ಒಬ್ಬೊಬ್ಬನಿಗೆ ಅನುಗ್ರಹಿಸಿದ ಪ್ರಕಾರವೇ ಅವನವನಿಗೆ ಕೃಪಾವರವು ದೊರಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತಯೇಸು ಅನುಗ್ರಹಿಸುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕ್ರಿಸ್ತನು ನಮ್ಮಲ್ಲಿ ಪ್ರತಿಯೊಬ್ಬರಿಗೂ ವಿಶೇಷವಾದ ವರವನ್ನು ಕೊಟ್ಟಿದ್ದಾನೆ. ಪ್ರತಿಯೊಬ್ಬನು ಕ್ರಿಸ್ತನ ಇಷ್ಟಾನುಸಾರವಾಗಿ ವರವನ್ನು ಪಡೆದುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಮ್ಮಲ್ಲಿ ಪ್ರತಿಯೊಬ್ಬನಿಗೂ ಕ್ರಿಸ್ತ ಯೇಸುವು ನೀಡಿದ ಅಳತೆಗೆ ಅನುಸಾರವಾಗಿ ವರವನ್ನು ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಅಮ್ಕಾ ಹರ್ ಎಕ್ಲ್ಯಾಕ್ನಿ ಕ್ರಿಸ್ತಾನ್ ನೆಮಲ್ಯಾ ಸಾರ್ಕೆ ಎಕ್ ವಿಶೆಸ್ ದೆನೆ ದಿಲ್ಲೆ ಹಾಯ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:7
13 ತಿಳಿವುಗಳ ಹೋಲಿಕೆ  

ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.


ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ನಿಮಗೋಸ್ಕರ ನಿರ್ವಹಿಸುವದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕೆಲಸವನ್ನೂ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ದೈವಪ್ರಕಟನೆಯಿಂದ ನನಗೆ ತಿಳಿಸಲ್ಪಟ್ಟಿತೆಂಬದನ್ನೂ ನೀವು ಕೇಳಿದ್ದೀರಲ್ಲಾ.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಅವನು ಒಬ್ಬನಿಗೆ ಐದು ತಲಾಂತು, ಒಬ್ಬನಿಗೆ ಎರಡು, ಒಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ಮತ್ತು ದೇವರು ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಾನಾ ವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ಪವಿತ್ರಾತ್ಮವರಗಳನ್ನು ತನ್ನ ಚಿತ್ತಾನುಸಾರವಾಗಿ ಅವರಿಗೆ ಅನುಗ್ರಹಿಸಿ ಅವರ ಮಾತಿಗೆ ಸಾಕ್ಷಿಕೊಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು