Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:26 - ಕನ್ನಡ ಸತ್ಯವೇದವು J.V. (BSI)

26 ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ದೆವಾಚ್ಯಾ ಲೊಕಾಂಚೊ ತಾಂಡೊ ಪವಿತ್ರ್ ಕರುಚೆ ಮನುನ್ ಕ್ರಿಸ್ತಾನ್ ಅಪ್ಲೊ ಜಿವ್ ದಿಲ್ಯಾನ್, ಬರಿ ಖಬರ್ ಮನ್ತಲ್ಯಾ ಪಾನಿಯಾನ್ ಧುವ್ನ್ ತೆನಿ ಪವಿತ್ರ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:26
35 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ಶುದ್ಧರಾಗಿದ್ದೀರಿ.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.


ಈತನು, ಅಂದರೆ ಯೇಸು ಕ್ರಿಸ್ತನು, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿಹೊಂದಿದವನು. ನೀರಿನಿಂದ ಮಾತ್ರವಲ್ಲ, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧರಾದೆವು.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ನೀನು ನನಗೆ ಕೊಟ್ಟದ್ದೆಲ್ಲಾ ನಿನ್ನಿಂದಲೇ ಬಂದದೆ ಎಂದು ಈಗ ಇವರು ತಿಳುಕೊಂಡಿದ್ದಾರೆ.


ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ನೀವು ಬಹಳ ಫಲಕೊಡುವದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವದು; ಮತ್ತು ನನ್ನ ಶಿಷ್ಯರಾಗುವಿರಿ.


ಆಗ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.


ಯಾಕಂದರೆ ನೀವು ಪರಿಶುದ್ಧರಾಗುವದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.


ಯೇಸು ಅವನಿಗೆ - ಸ್ನಾನಮಾಡಿಕೊಂಡವನ ಕಾಲುಗಳನ್ನು ತೊಳೆಯುವದಲ್ಲದೆ ಬೇರೇನೂ ತೊಳೆಯಬೇಕಾಗಿರುವದಿಲ್ಲ, ಅವನ ಮೈಯೆಲ್ಲಾ ಶುದ್ಧವಾಗಿದೆ. ನೀವೂ ಶುದ್ಧರಾಗಿದ್ದೀರಿ; ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದು ಹೇಳಿದನು.


ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬೇಡ. ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಅನ್ನುತ್ತದೆ. ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.


ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ಪವಿತ್ರರಾಗುತ್ತಿರುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಸಿದ್ಧಿಗೆ ತಂದಿದ್ದಾನಷ್ಟೆ.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.


ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.


ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು