Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:4 - ಕನ್ನಡ ಸತ್ಯವೇದವು J.V. (BSI)

4 ಹೊಲಸು ಮಾತು ಹುಚ್ಚು ಮಾತು ಕುಚೋದ್ಯ ಮಾತು ಇವು ಬೇಡ, ಅಯುಕ್ತವಾಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಲ್ಲದೆ ನಿಮ್ಮ ಮಧ್ಯದಲ್ಲಿ ಕೆಟ್ಟಮಾತುಗಳು ಇರಕೂಡದು. ನೀವು ಮೂರ್ಖತನದಿಂದ ಮಾತಾಡಕೂಡದು ಮತ್ತು ಹೊಲಸಾದ ಹಾಸ್ಯನುಡಿಗಳನ್ನು ಹೇಳಕೂಡದು. ಇವುಗಳು ನಿಮಗೆ ಯೋಗ್ಯವಾದವುಗಳಲ್ಲ. ಆದರೆ ನೀವು ದೇವರಿಗೆ ಸ್ತೋತ್ರ ಸಲ್ಲಿಸುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತವ್ಡೆ ನಸ್ತಾನಾ ತುಮ್ಚ್ಯಾ ಮದ್ದಿ ಬುರ್ಶಿ ಬೊಲ್ನಿ ರ್‍ಹಾತಲಿ ನಕ್ಕೊ ತುಮಿ ಪಿಶೆಪಾನಾನ್ ಬೊಲುನಕಾಸಿ, ಅನಿ ಬುರ್ಶಿ ಗೊಸ್ಟಿಯಾ ಸಾಂಗುನಕಾಸಿ ಹೆ ತುಮ್ಕಾ ಬರೆ ದಿಸಿನಾ, ಖರೆ ತುಮಿ ದೆವಾಕ್ ಧನ್ಯವಾದ್ ಮನ್ತಲೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:4
29 ತಿಳಿವುಗಳ ಹೋಲಿಕೆ  

ಈಗಲಾದರೋ ಕ್ರೋಧ ಕೋಪ ಮತ್ಸರ ದೂಷಣೆ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.


ಜ್ಞಾನಿಗಳ ನಾಲಿಗೆಯು ತಿಳುವಳಿಕೆಯನ್ನು ಸಾರ್ಥಕ ಮಾಡುವದು; ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಕ್ಕುವದು.


ಅಜ್ಞಾನಿಯ ಮಾತುಗಳ ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರುಳುತನ.


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ಆದರೆ ಈ ಜನರು ತಮಗೆ ಗೊತ್ತಿಲ್ಲದ ಎಲ್ಲವನ್ನೂ ದೂಷಿಸುತ್ತಾರೆ, ಮತ್ತು ತಾವು ವಿವೇಕಶೂನ್ಯಪಶುಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ವರ್ಣಿಸಲಶಕ್ಯವಾದ ದೇವರ ವರಕ್ಕಾಗಿ ಆತನಿಗೆ ಸ್ತೋತ್ರ.


ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.


ಯೆಹೋವನೇ, ನಿನ್ನನ್ನು ಕೊಂಡಾಡುವದೂ ಪರಾತ್ಪರನೇ, ನಿನ್ನ ನಾಮವನ್ನು ಸಂಕೀರ್ತಿಸುವದೂ ಯುಕ್ತವಾಗಿದೆ.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಜಾಣನು ತಿಳಿದದ್ದನ್ನು ಗುಪ್ತಪಡಿಸುವನು; ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವದು.


ಆದರೆ ಆ ಅಧರ್ಮಿಗಳ ನಾಚಿಕೆಗೆಟ್ಟ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.


ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸ ಧ್ವನಿಮಾಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವದು ಯುಕ್ತವಾಗಿದೆ.


ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸುವದಕ್ಕೆ ನನಗೆ ಕ್ರಿಸ್ತನಲ್ಲಿ ಪೂರಾ ಅಧಿಕಾರವಿದ್ದರೂ


ನಿಮ್ಮ ನಿವಿುತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಕ್ಕಾಗಿ ದೇವರಿಗೆ ತಕ್ಕಷ್ಟು ಸ್ತೋತ್ರಮಾಡುವದು ನಮ್ಮಿಂದ ಹೇಗಾದೀತು?


ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡಿ -


ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು.


ಕೊಳ್ಳಿಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು