Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:20 - ಕನ್ನಡ ಸತ್ಯವೇದವು J.V. (BSI)

20 ಆ ಸತ್ಯಾರ್ಥದ ನಿವಿುತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ, ಅದರ ವಿಷಯದಲ್ಲಿ ಧೈರ್ಯವಾಗಿ ಮಾತಾಡುವ ಹಂಗಿನಲ್ಲಿದ್ದೇನೆ; ಹಾಗೆಯೇ ನಾನು ಮಾತಾಡಬೇಕೆಂದು ನನಗೋಸ್ಕರ ಬೇಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಬರಿ ಖಬರ್ ಪರ್ಗಟ್ತಲೆಚ್ ಮಾಜೆ ಕಾಮ್ , ಹೊಲ್ಯಾರ್ಬಿ ಅತ್ತಾ ಬಂಧಿಖಾನ್ಯಾತ್ ಹಾಂವ್ ಮಿಯಾ ಸಮಾಕರುನ್ ಬರಿ ಖಬರ್ ಸಾಂಗ್ತಲೆ ಮಾಜೆ ಕಾಮ್ ಕರಿಸಾರ್ಕೆ ಮಾಜ್ಯಾ ಸಾಟ್ನಿ ಮಾಗ್ನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:20
31 ತಿಳಿವುಗಳ ಹೋಲಿಕೆ  

ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಅವನು ಅನೇಕಾವರ್ತಿ ನನ್ನನ್ನು ಆದರಿಸಿದನು;


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ನನಗೋಸ್ಕರ ಸಹ ಪ್ರಾರ್ಥನೆಮಾಡಿರಿ. ನಾನು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಾರ್ಥವನ್ನು ಭಯವಿಲ್ಲದೆ ತಿಳಿಸುವದಕ್ಕೆ ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿವಿುತ್ತವಾಗಿ ಈ ಬೇಡಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.


ಪೇತ್ರನೂ ಉಳಿದ ಅಪೊಸ್ತಲರೂ - ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಕೆಟ್ಟ ದೂತನು ಕೇಡಿಗೆ ಬೀಳುವನು; ನಂಬಿಕೆಯಾದ ರಾಯಭಾರಿಯು ಕ್ಷೇಮಕರನು.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.


ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.


ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಕಂಗೆಡಬೇಡ; ಕಂಗೆಟ್ಟರೆ ನಾನೂ ನಿನ್ನನ್ನು ಅವರ ಮುಂದೆ ಕಂಗೆಡಿಸುವೆನು.


ಇಗೋ, ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ; ಸಮಾಧಾಯಕ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.


ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇವಿುನವರ ಮತ್ತು ಯೆಹೂದ್ಯರ ಗುಂಪನ್ನು ಬಾಬೆಲಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.


ಆದದರಿಂದ ನಾವು ಇಂಥ ಭರವಸವುಳ್ಳವರಾಗಿದ್ದು ಧಾರಾಳವಾಗಿ ಮಾತಾಡುತ್ತೇವೆ.


ಇದಲ್ಲದೆ ನಮಗೋಸ್ಕರವೂ ಪ್ರಾರ್ಥನೆ ಮಾಡಿರಿ. ಕ್ರಿಸ್ತನ ವಿಷಯದಲ್ಲಿ ದೇವರು ತಿಳಿಯಪಡಿಸಿದ ಸತ್ಯಾರ್ಥವನ್ನು ಪ್ರಸಂಗಿಸುವದಕ್ಕೆ ಆತನು ಅನುಕೂಲವಾದ ಸಂದರ್ಭವನ್ನು ನಮಗೆ ದಯಪಾಲಿಸಿ ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ತಿಳಿಸುವಂತೆ ಅನುಗ್ರಹಮಾಡಬೇಕೆಂದು ಬೇಡಿಕೊಳ್ಳಿರಿ; ಆ ಸತ್ಯಾರ್ಥದ ನಿವಿುತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ಹಾಗೆ ಆಜ್ಞಾಪಿಸದೆ ಮುದುಕನೂ ಈಗ ಕ್ರಿಸ್ತ ಯೇಸುವಿನ ನಿವಿುತ್ತ ಸೆರೆಯವನೂ ಆಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿವಿುತ್ತ ನಿನ್ನನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು