Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:1 - ಕನ್ನಡ ಸತ್ಯವೇದವು J.V. (BSI)

1 ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:1
10 ತಿಳಿವುಗಳ ಹೋಲಿಕೆ  

ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ


ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಮಂದಿ ದೇಶಾಧಿಪತಿಗಳನ್ನೂ


ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಕಳುಹಿಸಿದನು.


ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು.


ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ -


ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳು ಪಟಪಟನೆ ಆಡುವ ನಾಡು, ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದೀಮಾರ್ಗವಾಗಿ ಕಳುಹಿಸುವ ದೇಶ, ಹೌದು.


ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರಭಾರಿಗಳನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ ಅಂತಃಪುರಪಾಲಕನೂ ರಾಜ ಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ; ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.


ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ದೇಶಗಳಲ್ಲಿಯೂ ಸಮುದ್ರದ್ವೀಪಗಳಲ್ಲಿಯೂ ತೆರಿಗೆಯನ್ನು ಎತ್ತಿದನು.


ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು. ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು