Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 10:3 - ಕನ್ನಡ ಸತ್ಯವೇದವು J.V. (BSI)

3 ಯೆಹೂದ್ಯನಾದ ಆ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಜನ ಸಮೂಹಕ್ಕೆ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೋಸ್ಕರ ಸುಖಪ್ರಾರ್ಥನಾಪರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 10:3
17 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಹಿತಚಿಂತಕನೊಬ್ಬನು ಬಂದನೆಂಬ ವರ್ತಮಾನವು ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್‍ದೇಶದವನಾದ ಟೋಬೀಯ ಎಂಬ ದಾಸನಿಗೂ ಮುಟ್ಟಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆಹೊಂದಬೇಕೆಂಬದೇ ನನ್ನ ಮನೋಭಿಲಾಷೆಯೂ ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.


ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.


ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಎಂದು ಹೇಳಿದನು.


ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಅರಸನು - ರಾಜನಿವೇಶನದಲ್ಲಿರುವ ರಾಜಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗ ನಮಸ್ಕಾರಮಾಡಬೇಕೆಂದು ಅಪ್ಪಣೆಮಾಡಿದ್ದರಿಂದ ಎಲ್ಲರೂ ಹಾಗೆ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಲಿಲ್ಲ.


ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವದಿಲ್ಲ; ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ ಎಂದು ಹೇಳಿ ದೇವರಲ್ಲಿ ಅವನನ್ನು ಬಲಪಡಿಸಿದನು.


ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದದರಿಂದ ಅವನು ವಿುಕ್ಕ ಮುಖ್ಯಾಧಿಕಾರಿಗಳಿಗಿಂತಲೂ ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು; ಅವನನ್ನು ರಾಜನು ಪೂರ್ಣರಾಜ್ಯದ ಮೇಲೆ ನೇವಿುಸಲು ಉದ್ದೇಶಿಸಿದನು.


ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು; ನೀನೂ ನಿನ್ನ ಮಕ್ಕಳೂ ಮೊಮ್ಮಕ್ಕಳೂ ಕುರಿ ದನ ಮೊದಲಾದ ಸ್ವಾಸ್ತ್ಯಸಹಿತರಾಗಿ ನನ್ನ ಬಳಿಯಲ್ಲೇ ಇರಬಹುದು;


ಈ ಬರಗಾಲ ತೀರುವದಕ್ಕೆ ಇನ್ನೂ ಐದು ವರುಷ ಹೋಗಬೇಕು; ಆದದರಿಂದ ನಿನಗೂ ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು ಹೇಳುತ್ತಾನೆಂಬದಾಗಿ ತಿಳಿಸಿರಿ.


ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.


ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬೊಬ್ಬ ಯೆಹೂದಿ ಮನುಷ್ಯನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್‍ಕುಲದ ಕೀಷನ ಮರಿಮಗನೂ ಶಿಮ್ಗೀಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು