Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:10 - ಕನ್ನಡ ಸತ್ಯವೇದವು J.V. (BSI)

10 ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬುದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತನ್ನ ಸ್ವಜನರ ಹಾಗು ಬಂಧುಬಳಗದವರ ಬಗ್ಗೆ ಎಸ್ತೇರಳು ಯಾರಿಗೂ ತಿಳಿಸಿರಲಿಲ್ಲ. ತಿಳಿಸಬಾರದೆಂದು ಮೊರ್ದೆಕೈ ವಿಧಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಾನು ಯೆಹೂದ್ಯಳು ಎಂದು ಎಸ್ತೇರಳು ಯಾರಿಗೂ ಹೇಳಲಿಲ್ಲ. ತನ್ನ ವಂಶ, ಮನೆತನದ ವಿಚಾರವಾಗಿಯೂ ಯಾರಿಗೂ ತಿಳಿಸಲಿಲ್ಲ. ಯಾಕೆಂದರೆ ಮೊರ್ದೆಕೈ ಆಕೆಗೆ ತನ್ನ ವಿಷಯವಾಗಿ ಯಾರಿಗೂ ಹೇಳಬಾರದೆಂದೂ ಕಟ್ಟಪ್ಪಣೆ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಎಸ್ತೇರಳು ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ತಿಳಿಸಲಿಲ್ಲ. ಏಕೆಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:10
9 ತಿಳಿವುಗಳ ಹೋಲಿಕೆ  

ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಈಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬದನ್ನು ತೋರ್ಪಡಿಸಲಿಲ್ಲ.


ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಬೇಕು; ಇದು ಧರ್ಮ.


ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.


ಜನರು ನಮ್ಮನ್ನು ಕೊಂದು ಸಂಹರಿಸಿ ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ದಾಸದಾಸಿಯರಾಗುವದಕ್ಕೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆ ಪಡಿಸುವದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು ಎಂದು ಉತ್ತರಕೊಟ್ಟಳು.


ಇವನು ಎಸ್ತೇರಳೆಂಬ ಹೆಸರನ್ನು ಪಡೆದ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆ ತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಈಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.


ಅವನು ಆಕೆಯ ಈಗಿನ ಸ್ಥಿತಿಯನ್ನೂ ಮುಂದಿನ ಗತಿಯನ್ನೂ ವಿಚಾರಿಸುವದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.


ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಮಲಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು