ಎಸ್ತೇರಳು 4:3 - ಕನ್ನಡ ಸತ್ಯವೇದವು J.V. (BSI)3 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸರೋದನ ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕೂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದ ಸಂಸ್ಥಾನಗಳಲ್ಲೆಲ್ಲಾ ಯೆಹೂದ್ಯರೊಳಗೆ ಅತೀವ ದುಃಖವುಂಟಾಗಿ ಅನೇಕರು ಉಪವಾಸ ಕೈಗೊಂಡರು. ರೋದನ-ಆಕ್ರಂದನಗಳೊಡನೆ ಗೋಣಿತಟ್ಟನ್ನು ಹೊದ್ದು ಬೂದಿಯಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರವನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿ |
ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯೂ ಇತ್ತು.