Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:14 - ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಅವನು ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ - ಐವತ್ತು ಮೊಳ ಎತ್ತರವಾದ ಒಂದು ಗಲ್ಲುಮರವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಮರವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:14
22 ತಿಳಿವುಗಳ ಹೋಲಿಕೆ  

ಅರಸನು - ಪ್ರಾಕಾರದಲ್ಲಿ ಯಾರಿದ್ದಾರೆ ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನೇ ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಅರಸನ ಅಪ್ಪಣೆಪಡಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದಿದ್ದನು.


ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.


ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದುಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.


ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ - ನೀನು ಇಸ್ರಾಯೇಲ್ಯರ ಅರಸನೋ; ಎದ್ದು ಊಟಮಾಡಿ ಸಂತೋಷದಿಂದಿರು; ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂದು ನುಡಿದು


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.


ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವದಕ್ಕೆ ಕಾದಿರುತ್ತಾರೆ.


ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದುಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಹೋಗಿ ನಿನ್ನ ತಂದೆಯು ಮನೆಕಾಯುವದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗವಿುಸು. ಹೀಗೆ ಮಾಡುವದಾದರೆ ನೀನು ನಿನ್ನ ತಂದೆಗೆ ಅಸಹ್ಯವಾದಿಯೆಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು