Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:9 - ಕನ್ನಡ ಸತ್ಯವೇದವು J.V. (BSI)

9 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಲಿನಲ್ಲಿ ಕೂತಿರುವದನ್ನು ಕಂಡು ಅವನ ಮೇಲೆ ಕೋಪಭರಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಂದು ಹಾಮಾನನು ಹರ್ಷಭರಿತನಾಗಿ ಮನೆಗೆ ಹಿಂದಿರುಗುತ್ತಿರುವಾಗ ಮೊರ್ದೆಕೈ ತನಗೆ ಭಯಪಡದೆ, ತನ್ನ ಮುಂದೆ ಏಳದೆಯೂ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡೇ ಇರುವುದನ್ನು ಕಂಡು ಅವನ ಮೇಲೆ ಕಡುಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹಾಮಾನನು ಹರ್ಷ ತುಂಬಿದವನಾಗಿ ರಾಜ ಸನ್ನಿಧಿಯಿಂದ ತನ್ನ ಮನೆಗೆ ತೆರಳಿದನು. ಆದರೆ ಹೆಬ್ಬಾಗಿಲ ಬಳಿಯಲ್ಲಿ ಮೊರ್ದೆಕೈಯನ್ನು ನೋಡಿದಾಗ ಅವನ ಮೇಲೆ ಹಾಮಾನನ ಕೋಪ ಉಕ್ಕಿ ಬಂತು. ಯಾಕೆಂದರೆ ಮೊರ್ದೆಕೈ ಹಾಮಾನನಿಗೆ ಯಾವ ಗೌರವವನ್ನೂ ಕೊಟ್ಟಿರಲಿಲ್ಲ ಮತ್ತು ಅವನಿಗೆ ಭಯಪಡಲಿಲ್ಲ. ಇದು ಹಾಮಾನನನ್ನು ಸಿಟ್ಟಿಗೇರುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿನದಲ್ಲಿ ಹಾಮಾನನು ಹರ್ಷಭರಿತನಾಗಿ ಹೊರಟುಹೋದನು. ಆದರೆ ಅರಮನೆಯ ಹೆಬ್ಬಾಗಿಲಲ್ಲಿರುವ ಮೊರ್ದೆಕೈ ತನಗೆ ಭಯಪಡದೆ ಕುಳಿತುಕೊಂಡೇ ಇರುವುದನ್ನು ಹಾಮಾನನು ಕಂಡು ಮೊರ್ದೆಕೈಯ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:9
19 ತಿಳಿವುಗಳ ಹೋಲಿಕೆ  

ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುವದಿಲ್ಲವೆಂದು ಹಾಮಾನನು ನೋಡಿ ಬಹು ಕೋಪವುಳ್ಳವನಾದನು.


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಗುವದನ್ನು ಬಿಟ್ಟು ಗೋಳಾಡಿರಿ; ಸಂತೋಷವನ್ನು ಬಿಟ್ಟು ಮನಗುಂದಿದವರಾಗಿರಿ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ, ಆದರೆ ಲೋಕವು ಸಂತೋಷಿಸುವದು; ನಿಮಗೆ ದುಃಖವಾಗುವದು, ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವದು.


ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.


ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಹಿಡತರಬೇಕೆಂದು ಆಜ್ಞಾಪಿಸಿದನು.


ನನಗೆ ವಿರೋಧವಾಗಿ ದಂಡುಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ ಭರವಸವುಳ್ಳವನಾಗಿಯೇ ಇರುವೆನು.


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ನನ್ನ ಗುಡಾರದ ಆಳುಗಳು - ನಮ್ಮ ಯಜಮಾನನಿಕ್ಕಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ದುಷ್ಟರ ಉತ್ಸಾಹಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ಅರಸನು - ರಾಜನಿವೇಶನದಲ್ಲಿರುವ ರಾಜಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗ ನಮಸ್ಕಾರಮಾಡಬೇಕೆಂದು ಅಪ್ಪಣೆಮಾಡಿದ್ದರಿಂದ ಎಲ್ಲರೂ ಹಾಗೆ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಲಿಲ್ಲ.


ಕನ್ಯೆಯರು ಎರಡನೆಯ ಸಾರಿ ಕೂಡಿಸಲ್ಪಡುತ್ತಿರುವಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಲಲ್ಲಿ ಕೂತುಕೊಂಡಿದ್ದನು.


ನನ್ನ ಪಿತ್ರಾರ್ಜಿತಸ್ವಾಸ್ತ್ಯವನ್ನು ನಿನಗೆ ಕೊಡುವದಿಲ್ಲವೆಂದು ನಾಬೋತನು ಹೇಳಿದದರಿಂದ ಅಹಾಬನು ಸಿಟ್ಟಿನಿಂದ ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಲಿನಲ್ಲಿ ನನ್ನ ಕಣ್ಣು ಮುಂದೆ ಕೂತಿರುವವರೆಗೂ ಇದೆಲ್ಲದರಿಂದಲೂ ನನಗೆ ತೃಪ್ತಿಯಾಗುವದಿಲ್ಲ ಅಂದನು.


ನಾನು ಇಜ್ರೇಲಿನವನಾದ ನಾಬೋತನಿಗೆ - ನಿನ್ನ ದ್ರಾಕ್ಷೇತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂಬದಾಗಿ ಹೇಳಿದೆನು; ಆದರೆ ಅವನು ಕೊಡುವದಿಲ್ಲ ಅಂದನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು