Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:1 - ಕನ್ನಡ ಸತ್ಯವೇದವು J.V. (BSI)

1 ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆ ಬರಲಿಲ್ಲ; ಆದದರಿಂದ ಸ್ಮರಿಸತಕ್ಕ ಪೂರ್ವವೃತ್ತಾಂತಗಳ ಗ್ರಂಥವನ್ನು ಅವನು ತರಿಸಿ ಪಾರಾಯಣಮಾಡಿಸುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:1
12 ತಿಳಿವುಗಳ ಹೋಲಿಕೆ  

ಅನಂತರ ರಾಜನು ಅರಮನೆಗೆ ಹೋಗಿ ವಿನೋದ ವಾದ್ಯಗಳನ್ನು ತನ್ನ ಮುಂದೆ ತರಿಸದೆ ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆತಪ್ಪಿತು.


ನೆಬೂಕದ್ನೆಚ್ಚರನು ತನ್ನ ಆಳಿಕೆಯ ಎರಡನೆಯ ವರುಷದಲ್ಲಿ ಕನಸುಕಂಡು ತತ್ತರಗೊಂಡನು,


ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸ್ಥಾಪನೆಯಾದದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿದರು. ಆ ಸಂಗತಿಯು ರಾಜನ ದಿನಚರ್ಯಪುಸ್ತಕದಲ್ಲಿ ಬರೆಯಲ್ಪಟ್ಟಿತು.


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ ಅವನ ಅನುಗ್ರಹದಿಂದ ಮೊರ್ದೆಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರವೂ ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ.


ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.


ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ ಎಂದು ಉತ್ತರಕೊಟ್ಟಳು.


ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್‍ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.


ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ಹೆಬ್ಬಾಗಲಿನಲ್ಲಿ ಕೂತುಕೊಂಡಿದ್ದಾಗ ಅರಮನೆಯ ದ್ವಾರಪಾಲಕರಾದ ಬಿಗೆತಾನ್ ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರೋಧವಾಗಿ ಕೈಯೆತ್ತಬೇಕೆಂದು ಒಳಸಂಚುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು