Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:4 - ಕನ್ನಡ ಸತ್ಯವೇದವು J.V. (BSI)

4 ಅರಸನು - ಪ್ರಾಕಾರದಲ್ಲಿ ಯಾರಿದ್ದಾರೆ ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನೇ ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಅರಸನ ಅಪ್ಪಣೆಪಡಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೂಡಲೆ ಅರಸನು, “ಯಾರಲ್ಲಿ, ಅಂಗಳದಲ್ಲಿ?” ಎಂದು ವಿಚಾರಿಸಿದನು. ಅಷ್ಟರಲ್ಲಿ, ತಾನೇ ಸಿದ್ಧಮಾಡಿಸಿದ್ದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಅಪ್ಪಣೆಯನ್ನು ಪಡೆಯುವುದಕ್ಕೋಸ್ಕರ ಹಾಮಾನನು ಆಗತಾನೆ ಅರಮನೆಯ ಹೊರಗಣ ಅಂಗಳಕ್ಕೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದೇ ಸಮಯದಲ್ಲಿ ಹಾಮಾನನು ಹೊರಾಂಗಣದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲುಕಂಬದಲ್ಲಿ ಮೊರ್ದೆಕೈಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅರಸನು, “ಯಾರು ಅಂಗಳದಲ್ಲಿ?” ಎಂದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳಕ್ಕೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:4
12 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ - ಐವತ್ತು ಮೊಳ ಎತ್ತರವಾದ ಒಂದು ಗಲ್ಲುಮರವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಅರಸನು ಕರಿಸಿದರೆ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀ ಪುರುಷರಿಗುಂಟು; ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರೆಂಬದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತುಂಟಲ್ಲಾ; ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವದಕ್ಕೆ ಆಮಂತ್ರಣವಾಗಲಿಲ್ಲ ಎಂದು ಹೇಳಿಸಿದಳು.


ಪರಲೋಕದಲ್ಲಿ ಆಸನಾರೂಢನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.


ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರ ಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜ ಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಲಿಗೆದುರಾಗಿ ಕೂತುಕೊಂಡಿದ್ದನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಂಡು ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ಇದಲ್ಲದೆ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು - ಇಗೋ ಈ ಹಾಮಾನನ ಮನೆಯ ಹತ್ತಿರ ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಇವನಿಂದ ಸಿದ್ಧಮಾಡಲ್ಪಟ್ಟ ಐವತ್ತು ಮೊಳ ಎತ್ತರವಾದ ಗಲ್ಲು ಮರವಿರುತ್ತದಲ್ಲಾ ಅನ್ನಲು ಅರಸನು - ಇವನನ್ನು ಅದಕ್ಕೆ ನೇತುಹಾಕಿರಿ ಎಂದು ಆಜ್ಞಾಪಿಸಿದನು.


ಆಗ ಅರಸನು - ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವೆಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು - ಏನೂ ದೊರಕಲಿಲ್ಲ ಎಂದು ಹೇಳಿದರು.


ಆದದರಿಂದ ರಾಜಸೇವಕರು - ಇಗೋ, ಪ್ರಾಕಾರದಲ್ಲಿ ಹಾಮಾನನಿರುತ್ತಾನೆ ಎಂದು ಬಿನ್ನವಿಸಿದರು. ಆಗ ಅರಸನು - ಅವನು ಒಳಗೆ ಬರಲಿ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು