Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:9 - ಕನ್ನಡ ಸತ್ಯವೇದವು J.V. (BSI)

9 ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:9
10 ತಿಳಿವುಗಳ ಹೋಲಿಕೆ  

ಅವನು - ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿದ್ದು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕೆಂಬದಾಗಿ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.


ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಮಂದಿ ದೇಶಾಧಿಪತಿಗಳನ್ನೂ


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗಕುಲಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ -


ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ - ನೀನು ಮಾತಾಡುವದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತಾಡಬೇಡ ಎಂದು ಹೇಳಿದರು.


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು - ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಅವರು ಆಸನ ಆಳಿಕೆಯ ಹದಿನೈದನೆಯ ವರುಷದ ಮೂರನೆಯ ತಿಂಗಳಲ್ಲಿ ಯೆರೂಸಲೇವಿುನಲ್ಲಿ ಕೂಡಿಬಂದು


ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ದೇಶಗಳಲ್ಲಿಯೂ ಸಮುದ್ರದ್ವೀಪಗಳಲ್ಲಿಯೂ ತೆರಿಗೆಯನ್ನು ಎತ್ತಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು