Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:20 - ಕನ್ನಡ ಸತ್ಯವೇದವು J.V. (BSI)

20 ಮೊರ್ದೆಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೊರ್ದೆಕೈಯು ಅಹಷ್ವೇರೋಷನ ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಎಲ್ಲಾ ಯೆಹೂದ್ಯರಿಗೆ, ಸಮೀಪದಲ್ಲೂ ದೂರದಲ್ಲೂ ಇದ್ದವರು ಎಲ್ಲರಿಗೂ ಪತ್ರಗಳ ಮುಖಾಂತರ ಈ ಕೆಳಕಂಡ ಸಂಗತಿಗಳನ್ನು ತಿಳಿಯಪಡಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಡೆದ ಸಂಗತಿಗಳನ್ನೆಲ್ಲಾ ಮೊರ್ದೆಕೈ ಬರೆದಿಟ್ಟು ಅಹಷ್ವೇರೋಷನ ಸಾಮ್ರಾಜ್ಯದಲ್ಲಿ ವಾಸಿಸಿದ್ದ ಎಲ್ಲಾ ಯೆಹೂದ್ಯರಿಗೆ, ದೂರ ಮತ್ತು ಹತ್ತಿರದಲ್ಲಿರುವ ಯೆಹೂದ್ಯರಿಗೂ ಪತ್ರ ಬರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೊರ್ದೆಕೈಯು ಈ ಘಟನೆಗಳನ್ನು ಬರೆದು ಅರಸನಾದ ಅಹಷ್ವೇರೋಷನ ಸಕಲ ಪ್ರಾಂತಗಳಲ್ಲಿ ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಯೆಹೂದ್ಯರು ಎಲ್ಲರಿಗೂ ಪತ್ರಗಳ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:20
16 ತಿಳಿವುಗಳ ಹೋಲಿಕೆ  

ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.


ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯೂ ಇತ್ತು.


ಅವನು - ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿದ್ದು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕೆಂಬದಾಗಿ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.


ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಆತನ ಸೇವಕನಾದ ಇಸ್ರಾಯೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,


ಆದದರಿಂದ ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುನಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿವಸವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸುತ್ತಾರೆ.


ಪ್ರತಿವರುಷವೂ ಫಾಲ್ಗುನಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವದು ಶಾಶ್ವತನಿಯಮ ಎಂದೆಣಿಸಬೇಕು.


ಆ ಪೂರ್ ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ ಪೂರೀಮ್ ಎಂಬ ಹೆಸರಾಯಿತು. ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು -


ಪ್ರತಿವರುಷವೂ ಆ ಎರಡು ದಿವಸಗಳನ್ನು ಅವುಗಳ ವಿಷಯವಾದ ಶಾಸನದ ಪ್ರಕಾರ ನೇವಿುತವಾದ ಕಾಲದಲ್ಲಿ ಆಚರಿಸುವದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಕೂಡಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಗಬೇಕೆಂದೂ


ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್‍ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.


ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇವಿುನ ಸರದಾರರು, ಶಿಲ್ಪಿಗಳು, ಕಮ್ಮಾರರು, ಇವರು ಯೆರೂಸಲೇವಿುನಿಂದ ತೊಲಗಿದ ಮೇಲೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು