Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:22 - ಕನ್ನಡ ಸತ್ಯವೇದವು J.V. (BSI)

22 ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿಯುಂಟಾಯಿತು; ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂತು. ಆದದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸಿ ಬಡವರಿಗೆ ದಾನಧರ್ಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:22
24 ತಿಳಿವುಗಳ ಹೋಲಿಕೆ  

ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.


ಆದರೆ ನೀವು ನಮ್ಮಲ್ಲಿರುವ ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.


ಮತ್ತು ಯೆಹೋವನು ನಿಮ್ಮ ಸಂಕಟದಿಂದಲೂ ಕಳವಳದಿಂದಲೂ ಕಠಿನವಾದ ಬಿಟ್ಟಿಯ ಸೇವೆಯಿಂದಲೂ


ಆದದರಿಂದ ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುನಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿವಸವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸುತ್ತಾರೆ.


ಹೇಗೂ ಒಳಗಿರುವಂಥದನ್ನು ದಾನಾಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.


ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.


ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವದರಲ್ಲಿ ಕೊಡು ಎಂದು ಹೇಳಿರಿ ಅಂದು ಅವರನ್ನು ಕಳುಹಿಸಿದನು.


ಪ್ರತಿವರುಷವೂ ಫಾಲ್ಗುನಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವದು ಶಾಶ್ವತನಿಯಮ ಎಂದೆಣಿಸಬೇಕು.


ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಸ್ವೀಕರಿಸಿ ಆ ವರುಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ಗೊತ್ತುಮಾಡಿಕೊಂಡರು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.


ಅದರಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ಸಂಭ್ರಮದಿಂದಿರಬೇಕು.


ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲವಾಗಿ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.


ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.


ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು.


ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು