ಎಸ್ತೇರಳು 9:25 - ಕನ್ನಡ ಸತ್ಯವೇದವು J.V. (BSI)25 (ಇದು ಅರಸನ ಮುಂದೆ ಬಂದಾಗ ಅವನು - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕೆಂದು ಅಪ್ಪಣೆ ಮಾಡಿದನಷ್ಟೆ. ) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು; ಅಧ್ಯಾಯವನ್ನು ನೋಡಿ |