Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:18 - ಕನ್ನಡ ಸತ್ಯವೇದವು J.V. (BSI)

18 ಯಾಕೋಬನ ವಂಶವು ಅಗ್ನಿ, ಯೋಸೇಫನ ವಂಶವು ಜ್ವಾಲೆ, ಏಸಾವನ ವಂಶವು ಕೂಳೆ; ಆ ಅಗ್ನಿಜ್ವಾಲೆಗಳು ಕೂಳೆಯಲ್ಲಿ ಧಗಧಗಿಸುತ್ತಾ ಅದನ್ನು ನುಂಗಿಬಿಡುವವು; ಏಸಾವನ ವಂಶದವರಲ್ಲಿ ಯಾರೂ ಉಳಿಯರು; ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:18
23 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇವಿುನವರು ತಮ್ಮ ಸ್ಥಳವಾದ ಯೆರೂಸಲೇವಿುನಲ್ಲಿಯೇ ಇನ್ನು ವಾಸಿಸುವರು.


ಇಸ್ರಾಯೇಲ್ಯರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವದು, ಅವರ ಸದಮಲಸ್ವಾವಿುಯು ಜ್ವಾಲೆಯಂತಿರುವನು; ಅದು ಒಂದೇ ದಿವಸದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವದು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ದಂಡವನ್ನು ನಾನು ತೆಗೆದು ಯೆಹೂದದ ದಂಡಕ್ಕೆ ಉದ್ದವಾಗಿ ಸೇರಿಸಿ ಅವೆರಡನ್ನು ನನ್ನ ಕೈಯಲ್ಲಿ ಒಂದೇ ದಂಡವಾಗಿ ಹಿಡಿಯುವೆನು ಎಂಬದನ್ನು ಹೇಳು.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ಆ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ರತ್ನ ಕಟ್ಟಿಗೆ ಹುಲ್ಲು ಆಪು ಮುಂತಾದವುಗಳಲ್ಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


[ನನ್ನ ಜನರೇ,] ನೀವು ನನ್ನ ಪವಿತ್ರ ಪರ್ವತದಲ್ಲಿ [ವಿಪತ್ಪಾನಕವನ್ನು] ಪಾನಮಾಡಿದಂತೆಯೇ ಸಕಲ ಜನಾಂಗಗಳೂ ನಿತ್ಯವಾಗಿ ಪಾನಮಾಡುವವು; ಹೌದು, ಕುಡಿದು ನುಂಗಿಬಿಟ್ಟು ಇಲ್ಲದ ಹಾಗಾಗುವವು.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ, ಉತ್ತಮೋತ್ತಮ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫಿನ ಗಾಯಕ್ಕೆ ಮರುಗರು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ಪರ್ವತಾಗ್ರಗಳಲ್ಲಿ ಅವು ಹಾರಾಡುವ ಶಬ್ದವು ರಥಗಳ ಚೀತ್ಕಾರದಂತೆಯೂ ಕೂಳೆಯನ್ನು ನುಂಗುವ ಬೆಂಕಿಯ ಚಟಪಟ ಧ್ವನಿಯ ಹಾಗೂ ಕೇಳಿಸುತ್ತದೆ; ಅವು ವ್ಯೂಹಕಟ್ಟಿಕೊಂಡ ಪ್ರಬಲವಾದ ಸೈನ್ಯವೇ.


ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ - ಯೆಹೂದದ್ದು, ಯೆಹೂದಕ್ಕೆ ಸೇರಿದ ಇಸ್ರಾಯೇಲ್ಯರದು ಎಂದು ಬರೆದು ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ - ಯೋಸೇಫಿನದು, ಎಫ್ರಾಯೀವಿುನದು ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲ್ಯರದು ಎಂದು ಬರೆ;


ಆಹಾ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವದು, ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಉರಿಯಲ್ಲ.


ಅವರ ಶರಣನು ಭಯದಿಂದ ಹೋಗಿಬಿಡುವನು; ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇವಿುನಲ್ಲಿ ಒಲೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ಒಡೆಯನೇ, ನಿನ್ನ ಸೇವಕನಾದ ನಾನು ಪಾಪ ಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದದರಿಂದಲೇ ನಾನು ಈಹೊತ್ತು ಅರಸನನ್ನು ಎದುರುಗೊಳ್ಳುವದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಾಗಿ ಬಂದಿದ್ದೇನೆ ಎಂದು ಹೇಳಿದನು.


ದುಷ್ಟತನವು ಬೆಂಕಿಯಂತೆ ಉರಿದು ಮುಳ್ಳುಗಿಳ್ಳನ್ನು ನುಂಗಿ ಅರಣ್ಯದ ಪೊದೆಗಳನ್ನು ಹತ್ತಿಕೊಳ್ಳಲು ಅವು ಹೊಗೆಹೊಗೆಯಾಗಿ ಸುತ್ತಿಸುತ್ತಿಕೊಂಡು ಮೇಲಕ್ಕೆ ಏರುತ್ತವೆ.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು.


ದಂಡನೆಯ ವರುಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು ಎಂದು ಹೇಳಿದ್ದಾನೆ.


ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಹೀಗಿರಲಾಗಿ ಜನರು ಐಗುಪ್ತ ದೇಶದಲ್ಲೆಲ್ಲಾ ತಿರುಗಿ ಹುಲ್ಲು ಸಿಕ್ಕದೆ ಕೂಳೆ ಕಿತ್ತು ಕೂಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು