Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:19 - ಕನ್ನಡ ಸತ್ಯವೇದವು J.V. (BSI)

19 ಆಗ ದಕ್ಷಿಣಪ್ರಾಂತದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು; ಇಳಕಲಿನ ಪ್ರದೇಶದವರು ಫಿಲಿಷ್ಟಿಯವನ್ನೂ ಎಫ್ರಾಯೀವಿುನ ಭೂವಿುಯನ್ನೂ ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು; ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ದಕ್ಷಿಣವಲಯದವರು ಏಸಾವಿನ ಪರ್ವತವನ್ನು ಸ್ವಾಧೀನಪಡಿಸಿಕೊಳ್ಳುವರು. ಪಶ್ಚಿಮದ‌ ಬಯಲು ಸೀಮೆಯವರು ಫಿಲಿಷ್ಟಿಯವನ್ನೂ ಎಫ್ರಯಿಮ್ ಮತ್ತು ಸಮಾರ್ಯದ ಭೂಮಿಯನ್ನೂ ವಶಪಡಿಸಿಕೊಳ್ಳುವರು. ಬೆನ್ಯಾಮಿನ ವಂಶಜರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ನೆಗೆವಿನ ಜನರು ಏಸಾವಿನ ಪರ್ವತಗಳಲ್ಲಿ ವಾಸಿಸುವರು. ಬೆಟ್ಟದ ಕೆಳಗೆ ವಾಸಿಸುವವರು ಫಿಲಿಷ್ಟಿಯರ ದೇಶವನ್ನು ಆಕ್ರಮಿಸುವರು. ಎಫ್ರಾಯೀಮ್ ಮತ್ತು ಸಮಾರ್ಯದ ಜನರು ಜೀವಿಸುವರು. ಗಿಲ್ಯಾದ್ ಪ್ರಾಂತ್ಯವು ಬೆನ್ಯಾಮೀನರಿಗೆ ಸೇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದಕ್ಷಿಣದವರು ಏಸಾವನ ಬೆಟ್ಟವನ್ನೂ ಬಯಲಿನವರು ಫಿಲಿಷ್ಟಿಯರ ದೇಶವನ್ನೂ ಸ್ವತಂತ್ರಿಸಿಕೊಳ್ಳುವರು. ಎಫ್ರಾಯೀಮಿನ ಹೊಲಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನಮಾಡಿಕೊಳ್ಳುವರು ಬೆನ್ಯಾಮೀನನು ಗಿಲ್ಯಾದನ್ನು ವಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:19
33 ತಿಳಿವುಗಳ ಹೋಲಿಕೆ  

ನನ್ನ ಜನರು ಎದೋವಿುನ ವಿುಕ್ಕ ಭಾಗವನ್ನೂ ಯೆಹೋವನ ಪ್ರಜೆ ಎನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಾನು ನಿಲ್ಲಿಸಿ ಪೂರ್ವಕಾಲದಲ್ಲಿದ್ದಂತೆ ಅದನ್ನು ತಿರಿಗಿ ಕಟ್ಟಿಸುವೆನು ಎಂಬದಾಗಿ ಈ ಕಾರ್ಯಗಳನ್ನು ನೆರವೇರಿಸುವ ಯೆಹೋವನು ನುಡಿದಿದ್ದಾನೆ.


ಬೆನ್ಯಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು ಪತ್ರಕ್ಕೆ ರುಜುಹಾಕಿ ಮುಚ್ಚಿ ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವೆನಷ್ಟೆ. ಇದು ಯೆಹೋವನ ನುಡಿ.


ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ.


ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ ಯೆಹೂದದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಸ್ವದೇಶವಾಗಿ ಮಾಡಿಕೊಳ್ಳುವರು.


ಅರಸನು ಅವರಿಗೆ ಕೊಟ್ಟ ಉತ್ತರವು - ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಇವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ ಕ್ಷೇಮ ಇತ್ಯಾದಿ.


ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ - ನಿಮ್ಮೊಡನೆ ಕಟ್ಟುವದಕ್ಕೆ ನಮಗೂ ಅಪ್ಪಣೆಯಾಗಲಿ; ಯಾಕಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರಾಗಿದ್ದೇವೆ; ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಾರ್ಪಣೆಮಾಡುತ್ತಾ ಬಂದಿದ್ದೇವೆ ಎಂದು ಹೇಳಿದರು.


ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ಇಳಕಲಿನ ಪ್ರದೇಶದಲ್ಲಿ


ಎದೋಮ್ ಪ್ರಾಂತವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,


ಗಿಲ್ಯಾದಿನ ಅರ್ಧಭಾಗವೂ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.


ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್ ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,


ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡ ತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 40,500 ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು