Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:20 - ಕನ್ನಡ ಸತ್ಯವೇದವು J.V. (BSI)

20 ಸೆರೆಹೋಗಿರುವ ಆ ದಂಡಿನ ಇಸ್ರಾಯೇಲ್ಯರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು; ಸೆಪಾರದಿನಲ್ಲಿ ಸೆರೆಯಾಗಿರುವ ಯೆರೂಸಲೇವಿುನವರು ದಕ್ಷಿಣಪ್ರಾಂತದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸೆರೆಹೋಗಿರುವ ಇಸ್ರಯೇಲಿನ ಸೈನಿಕರು ಕಾನಾನ್ ನಾಡನ್ನು ಚಾರೆಪತಿನವರೆಗೆ ವಶಪಡಿಸಿಕೊಳ್ಳುವರು. ಸೆಪಾರದ ಎಂಬಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೆರೆ ಒಯ್ಯಲ್ಪಟ್ಟ ಇಸ್ರೇಲರು ಚಾರೆಪ್ತದವರೆಗೆ ಕಾನಾನ್ ದೇಶವನ್ನು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ನೆಗೆವಿನ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಚಾರೆಪತಿನವರೆಗೂ ಇರುವ ಪ್ರದೇಶವನ್ನು ಕಾನಾನ್ಯರಲ್ಲಿರುವ ಇಸ್ರಾಯೇಲ್ ಸೆರೆವಾಸಿಗಳು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿರುವ ಯೆರೂಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:20
12 ತಿಳಿವುಗಳ ಹೋಲಿಕೆ  

ಆದರೆ ಅವರಲ್ಲಿ ಒಬ್ಬರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಿದನು.


ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ.


ಬೆನ್ಯಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು ಪತ್ರಕ್ಕೆ ರುಜುಹಾಕಿ ಮುಚ್ಚಿ ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವೆನಷ್ಟೆ. ಇದು ಯೆಹೋವನ ನುಡಿ.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ದಕ್ಷಿಣದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.


ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನುಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲ್ಯರೇ ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವಾಸ್ತ್ಯವಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು