Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:21 - ಕನ್ನಡ ಸತ್ಯವೇದವು J.V. (BSI)

21 ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವಿನ ಪರ್ವತವನ್ನು ಆಳುವರು; ಆಗ ರಾಜ್ಯವು ಯೆಹೋವನದಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ವಿಜಯಿಗಳು ಚೀಯೋನ್ ಬೆಟ್ಟವನ್ನೇರಿ ಏಸಾವಿನ ಪರ್ವತಗಳಲ್ಲಿ ವಾಸಿಸುವ ಜನರನ್ನಾಳುವರು. ಆಗ ಸಾಮ್ರಾಜ್ಯವು ಯೆಹೋವನಿಗೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ರಕ್ಷಕನು ಏಸಾವಿನ ಪರ್ವತವನ್ನು ಆಳಲು ಚೀಯೋನ್ ಪರ್ವತವನ್ನು ಏರುವನು. ಆಗ ರಾಜ್ಯವು ಯೆಹೋವ ದೇವರದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:21
37 ತಿಳಿವುಗಳ ಹೋಲಿಕೆ  

ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.


ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಅವು ಐಗುಪ್ತದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ ಸಾಕ್ಷಿಯಾಗಿಯೂ ಇರುವವು; ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನುದ್ಧರಿಸುವನು.


ಆಗ ಯೆಹೋವನು ಅವರನ್ನು ಸೂರೆ ಮಾಡುವವರ ಕೈಯಿಂದ ತಪ್ಪಿಸುವದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದರೂ


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಜಲಪ್ರವಾಹಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ಕೇಳಿದೆನು. ಅದು - ಹಲ್ಲೆಲೂಯಾ; ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ;


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಆಗ ಕಬ್ಬಿಣಮಣ್ಣು ತಾಮ್ರಬೆಳ್ಳಿಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ


ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಇವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮುಂಚಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಇಸ್ರಾಯೇಲ್ಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು; ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.


ಆದದರಿಂದ ನೀನು ಅವರನ್ನು ಬಾಧಿಸುವ ವಿರೋಧಿಗಳ ಕೈಗೆ ಒಪ್ಪಿಸಿದಿ. ಅವರು ಆ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಬಿಡಿಸಿದಿ.


ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.


ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಆಳಿ ಭೂಪ್ರಜೆಗಳನ್ನೆಲ್ಲಾ ನಡಿಸುವಾತನಾಗಿರುವದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ.


ಯೆಹೋವನು ಆಕೆಗೆ - ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಅವೆ; ಆ ಎರಡು ಜನಾಂಗಗಳು ಜನ್ಮಾರಭ್ಯ ವಿರೋಧದಿಂದ ಭೇದವಾಗುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವದು; ಹಿರಿಯದು ಕಿರಿಯದಕ್ಕೆ ಸೇವೆ ಮಾಡುವದು ಎಂದು ಹೇಳಿದನು.


ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣುಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.


ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.


ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು