Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:2 - ಕನ್ನಡ ಸತ್ಯವೇದವು J.V. (BSI)

2 ದುಷ್ಟರು ಗರ್ವಿಷ್ಠರಾಗಿ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:2
18 ತಿಳಿವುಗಳ ಹೋಲಿಕೆ  

ಅವರ ಬಾಯಿಂದ ಬರುವದೆಲ್ಲಾ ಪಾಪವೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿ ಬೀಳಲಿ.


ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಲೀಸಬೇಡ; ದುರ್ಜನರಿಂದ ನಾವು ಭ್ರಷ್ಟರಾಗದಂತೆ ಮಾಡು.


ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ಬುರುಡೆಯ ಮೇಲೆ ಬೀಳುವದು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ನಿನ್ನ ಸೇವಕನ ಮೇಲಿಗಾಗಿ ಹೊಣೆಗಾರನಾಗು; ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.


ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ ಕೊಬ್ಬಿನಿಂದಲೂ ಅವರಿಗೆ ವಿರೋಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.


ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ಅಗೆದಿದ್ದಾರೆ.


ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳುಕಲ್ಪಿಸಿದ್ದಾರೆ; ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನೇಮಗಳನ್ನು ಕೈಕೊಳ್ಳುವೆನು.


ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ;


ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ ಯೋಚಿಸುತ್ತಾ - ಭೂವಿುಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ


ನೀನು ನಿನ್ನ ಮನಸ್ಸಿನಲ್ಲಿ - ನಾನು ಆಕಾಶಕ್ಕೆ ಹತ್ತಿ ಉತ್ತರದಿಕ್ಕಿನ ಕಟ್ಟಕಡೆಯಿರುವ ಸುರಗಣ ಪರ್ವತದಲ್ಲಿ ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಮೇಲೆ ಏರಿಸಿ ಆಸೀನನಾಗುವೆನು;


ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದರಲ್ಲಿ ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇದು!


ಆತನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನೇ ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ ಅಂದನು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ನಿನ್ನನ್ನು ಅವರ ಮುಂದೆ ಆಟಂಕವಾಗಿ ಒಡ್ಡುತ್ತೀಯಾ?


ಯಾಕಂದರೆ ಅವನು ಪ್ರೀತಿಸುವದನ್ನು ಮರೆತುಬಿಟ್ಟನು. ಬಡವನನ್ನೂ ದೀನನನ್ನೂ ಮನಗುಂದಿದವನನ್ನೂ ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು