Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:5 - ಕನ್ನಡ ಸತ್ಯವೇದವು J.V. (BSI)

5 ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:5
26 ತಿಳಿವುಗಳ ಹೋಲಿಕೆ  

ತನ್ನ ಪ್ರಜೆಯು ಉಲ್ಲಾಸದಿಂದಲೂ ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಚೀಯೋನ್ ನಗರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಆರ್ಭಟಿಸು! ಯೆರೂಸಲೇಮ್ ಪುರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!


ಯೆರೂಸಲೇಮ್ ಪುರಿಯನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು ನೆನಪುಮಾಡಿಕೊಳ್ಳಿರಿ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವದಕ್ಕೆ ಬದ್ಧರಾಗಿದ್ದೇವೆ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಹೇಗಂದರೆ ನಾವು ಪ್ರೀತಿಯಲ್ಲಿ ನಡೆದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು ನಮ್ಮನ್ನು ಜಗದುತ್ಪತ್ತಿಗೆ ಮುಂಚೆ ಕ್ರಿಸ್ತನಲ್ಲಿ ಆರಿಸಿಕೊಂಡನು.


ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.


ಚೀಯೋನಿನ ಸಂತತಿಯವರೇ, ನಿಮ್ಮ ದೇವರಾದ ಯೆಹೋವನಲ್ಲಿ ಹರ್ಷಿಸಿರಿ, ಉಲ್ಲಾಸಿಸಿರಿ; ಆತನು ಮುಂಗಾರನ್ನು ತಕ್ಕ ಹಾಗೆ ನಿಮಗೆ ಕೊಡುವನು; ಮುಂಗಾರು ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಉತ್ಸಾಹಧ್ವನಿಯೂ ಜಯಘೋಷವೂ ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.


ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ ಯೆಹೂದಸೀಮೆಯ ನಿವಾಸಿಗಳು ಆನಂದಪಡಲಿ.


ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.


ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಇಸ್ರಾಯೇಲ್ಯರು ಮಾತ್ರ ಯೆಹೋವನ ಸ್ವಂತ ಜನರಾದದ್ದೂ; ಯಾಕೋಬ್ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದದ್ದೂ;


ನಮ್ಮ ಪಟ್ಟಣವು ಇಸ್ರಾಯೇಲ್ಯರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲ್ಯರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದೀ; ನೀನು ಯೆಹೋವನ ಸ್ವಾಸ್ತ್ಯವನ್ನು ನುಂಗಿಬಿಡುವದೇಕೆ ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು