Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:12 - ಕನ್ನಡ ಸತ್ಯವೇದವು J.V. (BSI)

12 ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕರಗಿತ್ತವರ ಹೃದಯ ಕಡುಕಷ್ಟದಿಂದ I ಎಡವಿ ಬಿದ್ದಿದ್ದರು ಅಸಹಾಯತೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರ ಕಾರ್ಯಗಳ ನಿಮಿತ್ತವೇ ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು. ಅವರು ಎಡವಿಬಿದ್ದರು, ಅವರಿಗೆ ಸಹಾಯಮಾಡಲು ಯಾರೂ ಇರಲಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕನಿಲ್ಲದೆ ಕೆಳಗೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:12
19 ತಿಳಿವುಗಳ ಹೋಲಿಕೆ  

ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.


ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು; ಅವರು ನಿನಗೆ - ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು ಎಂದು ಹೇಳಲು ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡಿಯಲ್ಲಾ.


ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣ ಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.


ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವದಿಲ್ಲ; ಘಟಸರ್ಪದ ಸಹಾಯಕರು ಆತನಿಗೆ ಪಾದಾಕ್ರಾಂತರಾದರಲ್ಲಾ.


ನಮ್ಮ ಕಾಯಗಳ ಮೇಲೆಯೂ ಪಶುಗಳ ಮೇಲೆಯೂ ಅವರು ಅಧಿಕಾರ ನಡಿಸುತ್ತಾರೆ. ನಾವು ಮಹಾಸಂಕಟದಲ್ಲಿರುತ್ತೇವೆ ಅಯ್ಯೋ ಎಂದು ಪ್ರಾರ್ಥಿಸಿದರು.


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.


ಅವುಗಳನ್ನು ಒತ್ತಿ ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು ಎಂದು ಹೇಳಿ ಬಲವಾಗಿ ಬಾಗಿಕೊಳ್ಳಲು ಮನೆಯು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು.


ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ಫಿಲಿಷ್ಟಿಯರು ಅವನನ್ನು ಹಿಡಿದು ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಕಬ್ಬಿಣದ ಬೇಡಿಗಳನ್ನು ಹಾಕಿ ಸೆರೆಮನೆಯಲ್ಲಿ ಬೀಸುವದಕ್ಕೆ ಹಚ್ಚಿದರು.


ಇಸ್ರಾಯೇಲ್ಯರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ, ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ ಎಂಬದನ್ನು ಯೆಹೋವನು ನೋಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು