Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:13 - ಕನ್ನಡ ಸತ್ಯವೇದವು J.V. (BSI)

13 ದೇವರಿಂದ ಶೂರಕೃತ್ಯಗಳನ್ನು ನಡಿಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನು ಆತ ಖರೆಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಮಾತ್ರ ನಮ್ಮನ್ನು ಬಲಪಡಿಸಬಲ್ಲನು. ಆತನು ಮಾತ್ರ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:13
13 ತಿಳಿವುಗಳ ಹೋಲಿಕೆ  

ದೇವರಿಂದ ಶೂರಕೃತ್ಯಗಳನ್ನು ನಡಿಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.


ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ನಾನೊಬ್ಬನಾಗಿಯೇ ದ್ರಾಕ್ಷೆಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ಕಾಲಿನಿಂದ ಹೊಸಗಿದೆನು; ಅವರ ಸಾರವು ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಾಸಿಕೊಂಡೆನು.


ಗಾಳಿಯಿಂದ ಬಡಿಸಿಕೊಂಡು ಹೋಗುವ ದೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿಸಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.


ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನೂ ನನ್ನ ಬೆರಳುಗಳಿಗೆ ಕಾಳಗವನ್ನೂ ಕಲಿಸಿದ್ದಾನೆ.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.


ಅವರ ತೊಡೆ ಸೊಂಟಗಳನ್ನು ಮುರಿದು ಅವರನ್ನು ಸಂಹರಿಸಿ ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು