Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:16 - ಕನ್ನಡ ಸತ್ಯವೇದವು J.V. (BSI)

16 ಯಾಕಂದರೆ ಅವನು ಪ್ರೀತಿಸುವದನ್ನು ಮರೆತುಬಿಟ್ಟನು. ಬಡವನನ್ನೂ ದೀನನನ್ನೂ ಮನಗುಂದಿದವನನ್ನೂ ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಾರೊಬ್ಬನಿಗು ಮರುಕತೋರೆ ಮರೆತುಬಿಟ್ಟನವನು I ಕೊಲ್ಲಲು ಯತ್ನಿಸಿದನು ದೀನರನು, ಮನಗುಂದಿದವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೆಂದರೆ, ಆ ದುಷ್ಟನು ಯಾವ ಒಳ್ಳೆಯದನ್ನೂ ಮಾಡಲಿಲ್ಲ; ಯಾರನ್ನೂ ಪ್ರೀತಿಸಲಿಲ್ಲ. ಅವನು ಬಡಜನರಿಗೂ ಮತ್ತು ಅಸಹಾಯಕರಿಗೂ ಜೀವನವನ್ನು ಕಷ್ಟಕರವನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಅವನು ಯಾರಿಗೂ ದಯೆ ತೋರಿಸಲಿಲ್ಲ. ಬಡವನನ್ನೂ, ದೀನನನ್ನೂ, ಮನಗುಂದಿದವನನ್ನೂ ಹಿಂಸಿಸಿ ಸಾಯಿಸಬೇಕೆಂದು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:16
16 ತಿಳಿವುಗಳ ಹೋಲಿಕೆ  

ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದುಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.


ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.


ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ದುಷ್ಟರು ಗರ್ವಿಷ್ಠರಾಗಿ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿಬೀಳಲಿ.


ಆದರೆ ಅವರು ತಮ್ಮತಮ್ಮೊಳಗೆ - ನಾವು ನಮ್ಮ ತಮ್ಮನಿಗೆ ಮಾಡಿದ್ದು ದ್ರೋಹವೇ ಸರಿ; ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ; ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು