Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:9 - ಕನ್ನಡ ಸತ್ಯವೇದವು J.V. (BSI)

9 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:9
39 ತಿಳಿವುಗಳ ಹೋಲಿಕೆ  

ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ಭಕ್ತರ ಕೊಂಬುಗಳು ಎತ್ತಲ್ಪಡುವವು.


ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ನಿರೀಕ್ಷೆಯನ್ನಿಡಬೇಕೆಂತಲೂ ವಾಸ್ತವವಾದ ಜೀವವನ್ನು ಹೊಂದುವದಕ್ಕೋಸ್ಕರ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ದಾನಧರ್ಮಗಳನ್ನು ಮಾಡುವವರೂ ಪರೋಪಕಾರಮಾಡುವವರೂ ಆಗಿದ್ದು ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ಅವರಿಗೆ ಆಜ್ಞಾಪಿಸು.


ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವದು.


ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.


ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.


ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದೀ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದೀ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಅವರಲ್ಲಿ ಕೆಲವರು - ಯೂದನ ವಶದಲ್ಲಿ ಹಣದ ಚೀಲವಿದ್ದದರಿಂದ ಹಬ್ಬಕ್ಕಾಗಿ ನಮಗೆ ಬೇಕಾದದ್ದನ್ನು ಕೊಂಡುಕೋ ಎಂಬದಾಗಿಯೋ ಬಡವರಿಗೆ ಏನಾದರೂ ಕೊಡು ಎಂಬದಾಗಿಯೋ ಯೇಸು ಅವನಿಗೆ ಹೇಳುತ್ತಾನೆ ಎಂದು ನೆನಸಿದರು.


ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.


ನಿಮಗಿರುವದನ್ನು ಮಾರಿಬಿಟ್ಟು ದಾನಾ ಕೊಡಿರಿ; ಹಳೇವಾಗದಂಥ ಹಮ್ಮೀಣಿಗಳನ್ನು ಮಾಡಿಕೊಂಡು ಪರಲೋಕದಲ್ಲಿ ಲಯವಾಗದ ದ್ರವ್ಯವನ್ನು ಇಟ್ಟುಕೊಳ್ಳಿರಿ. ಅಲ್ಲಿ ಕಳ್ಳನು ಸಮೀಪಕ್ಕೆ ಬರುವದಿಲ್ಲ; ಅದು ನುಸಿಹಿಡಿದು ನಾಶವಾಗುವದಿಲ್ಲ.


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸು ಬಂದಾಗ ಅವರಿಗೆ ಉಪಕಾರಮಾಡಬಹುದು; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಅವನ ಮನೆಯಲ್ಲಿ ಧನೈಶ್ವರ್ಯಗಳಿರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವದು.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.


ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯ ಮಾಡಬೇಕೆಂದು ಆಜ್ಞಾಪಿಸಿದ್ದೇನೆ.


ಬಂದ ಕ್ರಯವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯದಂತೆ ಹಂಚಿಕೊಡುತ್ತಿದ್ದರು.


ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕಡಿಮೆಯಾಗಿದೆ; ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಹೇಗೂ ಒಳಗಿರುವಂಥದನ್ನು ದಾನಾಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.


ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು.


ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸ, ದ್ರಾಕ್ಷಾರಸ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.


ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರೋಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.


ಆತನ ಕಾರ್ಯವು ಘನಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವದು.


ಜ್ಞಾನಿಗಳ [ಜ್ಞಾನ] ಕೀರಿಟವೇ ಅವರ ಶ್ರೇಷ್ಠ ಸಂಪತ್ತು; ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.


ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.


ಗಳಿಸುವ ಸಮಯ, ಕಳೆಯುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಹರಿಯುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು