Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 115:4 - ಕನ್ನಡ ಸತ್ಯವೇದವು J.V. (BSI)

4 ಅವರ ವಿಗ್ರಹಗಳೋ ಬೆಳ್ಳಿಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ I ಅವು ಮಾನವನ ಕೈ ಕೆಲಸಗಳು ಮಾತ್ರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅನ್ಯಜನಾಂಗಗಳ “ದೇವರುಗಳು” ಬೆಳ್ಳಿಬಂಗಾರಗಳಿಂದ ಮಾಡಿದ ವಿಗ್ರಹಗಳಷ್ಟೇ. ಅವುಗಳನ್ನು ಮಾಡಿದವರು ಮನುಷ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನರ ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 115:4
23 ತಿಳಿವುಗಳ ಹೋಲಿಕೆ  

ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ ಕೇಳಲಾರದೆ ತಿನ್ನಲಾರದೆ ವಾಸನೆ ತಿಳುಕೊಳ್ಳಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


ದೇವತೆಯನ್ನು ರೂಪಿಸುವವರೂ ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು.


ಕಡೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ - ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ ಪಾಲಕರಾಗಿದ್ದಾರೆಂಬದನ್ನು ತಿಳಿಯದಿರುವ ಮನುಷ್ಯನು ಇದ್ದಾನೇ?


ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.


ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು ನೀವೇ ನಮ್ಮ ದೇವರುಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು.


ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ.


ಯೆರೂಸಲೇವಿುನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನೋ ಎಂಬಂತೆ ಆತನ ವಿಷಯದಲ್ಲಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೂದಾಯ ಭಾಷೆಯಲ್ಲಿ ಮಾತಾಡಿದರು.


ವಿಗ್ರಹ ಕೆತ್ತುವವರೆಲ್ಲಾ ಮಟ್ಟಮಾಯವೇ; ಅವರ ಇಷ್ಟದ ಬೊಂಬೆಗಳು ಯಾತಕ್ಕೂ ಬಾರವು; ಬೊಂಬೆಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ; ನಾಚಿಕೆಗೆ ಗುರಿಯಾಗುವರು.


ನೀವು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು