Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಸಾಧುಜನರನ್ನು ಕಾಪಾಡುವವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಾಪಾಡುವನು ಪ್ರಭು ಸರಳ ಜೀವಿಗಳನು I ರಕ್ಷಿಸಿದನು ಕುಗ್ಗಿದವನಾಗಿದ್ದ ಎನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಅಸಹಾಯಕರನ್ನು ಕಾಪಾಡುವನು. ನಾನು ಅಸಹಾಯಕನಾಗಿದ್ದಾಗ ಯೆಹೋವನು ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಸರಳ ಹೃದಯದವರನ್ನು ಕಾಪಾಡುತ್ತಾರೆ; ನಾನು ಕೊರತೆಯಲ್ಲಿದ್ದಾಗ, ಅವರು ನನ್ನನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:6
11 ತಿಳಿವುಗಳ ಹೋಲಿಕೆ  

ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆ ನಂಬಿಕೆಗೆ ಯೋಗ್ಯವಾದದ್ದು; ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹುವಾಗಿ ಕುಗ್ಗಿಹೋಗಿದ್ದೇವೆ.


ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಯಥಾರ್ಥತ್ವವೂ ನನ್ನನ್ನು ಕಾಯಲಿ.


ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ದಾಸತ್ವದಲ್ಲಿರುವವರೇ, ಈ ಲೋಕದಲ್ಲಿನ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ; ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ಕರ್ತನಿಗೆ ಭಯಪಡುವವರಾಗಿ ಸರಳಮನಸ್ಸಿನಿಂದ ಕೆಲಸಮಾಡಿರಿ.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದರಿಂದ ಇದನ್ನು ಬರೆದಿದ್ದೇನೆ; ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.


ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ ಅವರು ತಮ್ಮ ಆಲೋಚನೆಯನ್ನು ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು