Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:126 - ಕನ್ನಡ ಸತ್ಯವೇದವು J.V. (BSI)

126 ಯೆಹೋವನೇ, ನೀನು ಕಾರ್ಯನಡಿಸುವದಕ್ಕೆ ಸಮಯಬಂದದೆ; ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

126 ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

126 ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

126 ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

126 ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:126
14 ತಿಳಿವುಗಳ ಹೋಲಿಕೆ  

ಹೀಗಿರಲು ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ ಎಂದು ನೀವು ಅಂದುಕೊಳ್ಳುವದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳನ್ನಾಗಿ ಮಾಡಿದೆ.


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.


ಅವನಿಗೆ ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾದದ್ದಿಲ್ಲ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿವಿುತ್ತ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.


ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ.


ಧರ್ಮಶಾಸ್ತ್ರದವರು ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವೂ ಬರೀದಾಯಿತು.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.


ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. [ಈಗ] ಹೆರುವವಳಂತೆ ಮೂಲುಗುತ್ತಾ ಅಸುರುಸಿರಿನೊಡನೆ ಏದುವೆನು.


ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯವಿುತಕಾಲವು ಬಂದದೆ.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.


ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು