Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:137 - ಕನ್ನಡ ಸತ್ಯವೇದವು J.V. (BSI)

137 ಯೆಹೋವನೇ, ನೀನು ನೀತಿಸ್ವರೂಪನು; ನಿನ್ನ ವಿಧಿಗಳು ನ್ಯಾಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

137 ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

137 ಹೇ ಪ್ರಭೂ, ನೀನು ಸತ್ಯವಂತ I ನಿನ್ನ ವಿಧಿಯು ನ್ಯಾಯಸಮ್ಮತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

137 ಯೆಹೋವನೇ, ನೀನು ನೀತಿಸ್ವರೂಪನಾಗಿರುವೆ. ನಿನ್ನ ತೀರ್ಪುಗಳು ನ್ಯಾಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

137 ಯೆಹೋವ ದೇವರೇ, ನೀವು ನೀತಿವಂತರು, ನಿಮ್ಮ ನಿಯಮಗಳು ಸರಿಯಾದವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:137
15 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಯೆಹೋವನೇ, ಇಸ್ರಾಯೇಲ್‍ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿವಿುತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು ಎಂಬದೇ.


ಕರ್ತನೇ, ನೀನು ಧರ್ಮಸ್ವರೂಪ, ನಾವೋ ನಾಚಿಕೆಗೀಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇವಿುನ ನಿವಾಸಿಗಳೂ ನಿನಗೆ ವಿರುದ್ಧವಾಗಿ ಮಾಡಿದ ದ್ರೋಹದ ನಿವಿುತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲ್ಯರೂ ನಾಚಿಕೆಗೆ ಈಡಾಗಿದ್ದಾರೆ.


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು; ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆತೋರಿಸುವವನು.


ಆಮೇಲೆ ಯಜ್ಞವೇದಿಯು ಮಾತಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ ನಿಜ ಎಂದು ಹೇಳುವದನ್ನು ಕೇಳಿದೆನು.


ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲ ಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.


ಯೆಹೋವನು ನೀತಿಯನ್ನು ಸಾಧಿಸುವವನಾಗಿ ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ಧರ್ಮಸ್ವರೂಪನೇ; ನೀನು ಸತ್ಯವನ್ನೇ ನಡಿಸಿದಿ, ನಾವಾದರೋ ದುಷ್ಟರು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು