Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:161 - ಕನ್ನಡ ಸತ್ಯವೇದವು J.V. (BSI)

161 ಪ್ರಭುಗಳು ನಿಷ್ಕಾರಣವಾಗಿ ನನ್ನನ್ನು ಹಿಂಸಿಸುತ್ತಾರೆ; ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

161 ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

161 ಪೀಡಿಸುತಿಹರು ನಿಷ್ಕಾರಣವಾಗಿ ರಾಜರುಗಳು I ನಿನ್ನ ವಾಕ್ಯದ ಭೀತಿ ಇಹುದು ನನ್ನ ಹೃದಯದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

161 ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

161 ಅಧಿಕಾರಿಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ಆದರೆ ನನ್ನ ಹೃದಯವು ನಿಮ್ಮ ವಾಕ್ಯಗಳಿಗೆ ನಡುಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:161
14 ತಿಳಿವುಗಳ ಹೋಲಿಕೆ  

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟುನಡೆಯಲಿಲ್ಲ.


ನನ್ನ ಸ್ವಾವಿುಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವದೇಕೆ? ನಾನೇನು ಮಾಡಿದೆನು? ಯಾವ ಪಾಪಕ್ಕೆ ಕೈಹಾಕಿದೆನು?


ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಪ್ರಭುಗಳು ಕೂತುಕೊಂಡು ನನಗೆ ವಿರೋಧವಾಗಿ ಒಳಸಂಚುಮಾಡಿದರೂ ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.


ಭಯಪಡಿರಿ, ಪಾಪಮಾಡಬೇಡಿರಿ, ಮೌನವಾಗಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ. ಸೆಲಾ.


ದೇವರಿಂದ ಬರುವ ವಿಪತ್ತಿಗೆ ಅಂಜಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವದಕ್ಕಾಗಲಿಲ್ಲ.


ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ನಾನು ಈ ದೇಶವನ್ನೂ ನಿವಾಸಿಗಳನ್ನೂ ಶಾಪ ವಿಸ್ಮಯಗಳಿಗೆ ಗುರಿಮಾಡುವೆನೆಂಬದನ್ನು ನೀನು ಕೇಳಿದಾಗ ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಮರುಳಾಟದಿಂದ ಬೇಸರಗೊಳಿಸುವದಕ್ಕಾಗಿ ಇವನನ್ನು ತಂದಿರೋ? ಇಂಥವನು ನನ್ನ ಮನೆಗೆ ಬರಬೇಕೋ ಅಂದನು.


ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು