Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:36 - ಕನ್ನಡ ಸತ್ಯವೇದವು J.V. (BSI)

36 ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳಿಗೆ ತಿರುಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ತಿರುಗಿಸೆನ್ನ ಮನವ ನಿನ್ನ ಕಟ್ಟಳೆಯ ಕಡೆ I ಲಾಭಲೋಭದತ್ತ ಅದು ಸರಿಯದಂತೆ ತಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಐಶ್ವರ್ಯದ ಮೇಲೆ ಮನಸ್ಸಿಡದೆ ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸ್ವಾರ್ಥದ ಲಾಭಗಳ ಕಡೆಗಲ್ಲ, ಆದರೆ ನಿಮ್ಮ ಶಾಸನಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:36
19 ತಿಳಿವುಗಳ ಹೋಲಿಕೆ  

ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;


ನಾವು ನಮ್ಮ ಪಿತೃಗಳಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಲಿ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು.


ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ ನಾನು ದುಷ್ಟರೊಡನೆ ಕೂಡಿ ಕೆಟ್ಟ ಕೆಲಸಗಳನ್ನು ನಡಿಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.


ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ ತಾವು ಹಣದಾಶೆಯುಳ್ಳವರಾಗಿದ್ದದರಿಂದ ಹಾಸ್ಯಮಾಡಿದರು.


ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಅಯ್ಯೋ, ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ಕೇಡಿನೊಳಗಿಂದ ತಪ್ಪಿಸಿಕೊಳ್ಳಬೇಕೆಂದು ತನ್ನ ಕುಲಕ್ಕೆ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;


ಜಾರತ್ವ ಯಾವ ವಿಧವಾದ ಬಂಡುತನ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು; ಇವುಗಳಿಗೆ ದೂರವಾಗಿರುವದೇ ದೇವಜನರಿಗೆ ಯೋಗ್ಯವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು