Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 12:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಕೆಯುಳ್ಳವರು ಕಾಣಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನೆರವಾಗು ಪ್ರಭು, ಭಕ್ತರಿಲ್ಲವಾದರು ಜಗದೊಳು I ಶರಣರಾರೂ ಕಾಣಸಿಗರೆನಗೆ ನರಮಾನವರೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 12:1
18 ತಿಳಿವುಗಳ ಹೋಲಿಕೆ  

ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ಇದಲ್ಲದೆ ಅಧರ್ಮವು ಹೆಚ್ಚಾಗುವದರಿಂದ ಬಹುಜನರ ಪ್ರೀತಿಯು ತಣ್ಣಗಾಗಿಹೋಗುವದು.


ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣ ಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?


ದೇವರು ಲೋಕವನ್ನು ನೋಡಿದಾಗ ಅದು ಕೆಟ್ಟುಹೋಗಿತ್ತು; ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಅವರು ಹತ್ತರ ಬಂದು ಆತನನ್ನು ಎಬ್ಬಿಸಿ - ಸ್ವಾಮೀ, ಕಾಪಾಡು, ಸಾಯುತ್ತೇವೆ ಅನ್ನಲಾಗಿ


ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.


ಯೆಹೋವನೇ, ಅಭಿಮುಖನಾಗಿ ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿವಿುತ್ತವೇ ನನ್ನನ್ನು ರಕ್ಷಿಸು.


ಮತ್ತಿತ್ಯ, ಎಲೀಫೆಲೇಹು, ವಿುಕ್ನೇಯ, ಓಬೇದೆದೋಮ್, ಯೆಗೀಯೇಲ್, ಅಜಜ್ಯ ಎಂಬವರು ಗಾಯನ ನಾಯಕರಾಗಿದ್ದು ಮಂದರಸ್ಥಾಯಿಯ ಕಿನ್ನರಿಗಳನ್ನು ಬಾರಿಸುವವರು.


ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯ ಮೇಲೆ ಬಡಿದು ಅವರ ಹಲ್ಲುಗಳನ್ನು ಉದುರಿಸಿ ಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.


ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು.


[ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು