Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 12:4 - ಕನ್ನಡ ಸತ್ಯವೇದವು J.V. (BSI)

4 ಅವರು - ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾವನು ಎಂದು ಹೇಳಿಕೊಳ್ಳುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು; ನಮ್ಮ ತುಟಿಗಳೇ ನಮಗೆ ಸಂರಕ್ಷಣೆ ನಮ್ಮ ಮೇಲೆ ಒಡೆಯನು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 12:4
10 ತಿಳಿವುಗಳ ಹೋಲಿಕೆ  

ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.


ನೀವು ಇದರ ಹಣ್ಣನ್ನು ತಿಂದಾಗಲೇ ನಿಮ್ಮ ಕಣ್ಣುಗಳು ತೆರೆಯುವವು; ನೀವು ದೇವರಂತೆ ಆಗಿ ಒಳ್ಳೇದರ ಕೆಟ್ಟದ್ದರ ಭೇದವನ್ನು ಅರಿತವರಾಗುವಿರಿ; ಇದು ದೇವರಿಗೆ ಚೆನ್ನಾಗಿ ಗೊತ್ತುಂಟು ಅಂದಿತು.


ಯೆಹೋವನು ದೀನರ ವ್ಯಾಜ್ಯವನ್ನು ನಡಿಸುವನೆಂತಲೂ ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.


ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವದು; ನೀಚನ ನಾಲಿಗೆ ಕತ್ತರಿಸಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು