Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:6 - ಕನ್ನಡ ಸತ್ಯವೇದವು J.V. (BSI)

6 ಯೆರೂಸಲೇವಿುನ ಶುಭಕ್ಕೋಸ್ಕರ ಪ್ರಾರ್ಥಿಸಿರಿ. [ಯೆರೂಸಲೇಮೇ,] ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:6
16 ತಿಳಿವುಗಳ ಹೋಲಿಕೆ  

ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇವಿುನ ಪೌಳಿಗೋಡೆಯನ್ನು ಕಟ್ಟಿಸು.


ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇವಿುನ ಹಂಬಲು ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.


ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.


ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವದಕ್ಕೆ ಆಸಕ್ತರಾಗಿರಿ.


ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ.


ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಇಸ್ರಾಯೇಲ್ಯರ ಪ್ರಭುಗಳು ಮಾತ್ರ ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತತ್ತು ಮಂದಿಯಲ್ಲಿ ಒಂಭತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿದ್ದುಕೊಂಡು ಒಬ್ಬನು ಪವಿತ್ರನಗರವಾಗಿರುವ ಯೆರೂಸಲೇವಿುನಲ್ಲಿ ವಾಸಿಸುವದಕ್ಕಾಗಿ ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತು ಮಾಡಿದರು.


ಮತ್ತು ಸ್ವೇಚ್ಫೆಯಿಂದ ಯೆರೂಸಲೇವಿುನಲ್ಲಿ ವಾಸಿಸುವದಕ್ಕೆ ಮನಸ್ಸುಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ತಮ್ಮನ್ನು ಸಂಹರಿಸುವದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು - ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ ಎಂದು ಹೇಳಿಕಳುಹಿಸಿದನು.


ಯೆಹೋವನಿಗೆ ಜ್ಞಾಪಿಸುವವರೇ, ಆತನು ಯೆರೂಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವ ತನಕ ನಿಮಗೆ ವಿರಾಮವಿಲ್ಲದಿರಲಿ, ಆತನಿಗೂ ವಿರಾಮಕೊಡದಿರಿ.


ಯೆರೂಸಲೇಮ್ ಪುರಿಯನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು