Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 130:4 - ಕನ್ನಡ ಸತ್ಯವೇದವು J.V. (BSI)

4 ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 130:4
22 ತಿಳಿವುಗಳ ಹೋಲಿಕೆ  

ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ;


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.


ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿವಿುತ್ತ ಅದನ್ನು ಕ್ಷವಿುಸು.


ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;


ನೀನು ಸರ್ವಶಕ್ತನ ಕಡೆಗೆ ತಿರುಗಿಕೊಂಡು ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು