Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 146:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 146:9
22 ತಿಳಿವುಗಳ ಹೋಲಿಕೆ  

ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ; ದುಷ್ಟರನ್ನು ನೆಲಕ್ಕೆ ಹತ್ತಿಸಿಬಿಡುತ್ತಾನೆ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸವಿಡಲಿ.


ಯೆಹೋವನು ಗರ್ವಿಷ್ಠನ ಮನೆಯನ್ನು ಕಿತ್ತುಹಾಕುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ; ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ಶುದ್ಧನಿಗೆ ಪರಿಶುದ್ಧನೂ ಮೂರ್ಖನಿಗೆ ವಕ್ರನೂ ಆಗಿರುವಿ.


(ಇದು ಅರಸನ ಮುಂದೆ ಬಂದಾಗ ಅವನು - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕೆಂದು ಅಪ್ಪಣೆ ಮಾಡಿದನಷ್ಟೆ. )


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಅದಕ್ಕೆ ಅವನು ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ - ಐವತ್ತು ಮೊಳ ಎತ್ತರವಾದ ಒಂದು ಗಲ್ಲುಮರವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು