Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:10 - ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:10
23 ತಿಳಿವುಗಳ ಹೋಲಿಕೆ  

ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ ಸ್ವೀಕಾರ ಮಾಡುವನು. ಸೆಲಾ.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ಬರುತ್ತಿರುವ ನಿನ್ನನ್ನು ಎದುರುಗೊಳ್ಳುವದಕ್ಕೆ ಕೆಳಗಡೆ ಪಾತಾಳವು ತಳಮಳಪಡುತ್ತದೆ; ನಿನಗೋಸ್ಕರ ಪ್ರೇತಗಳನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ ಜನಾಂಗಗಳ ಸಕಲ ರಾಜರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ನಿರ್ಲಯಾವಸ್ಥೆಯಲ್ಲಿ ಎದ್ದುಬರುವದು;


ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳೆಲ್ಲಾ ಯಾವ ಶವವನ್ನೂ ಮುಟ್ಟಬಾರದು.


ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನು ಯೆಹೋವನು.


ಆ ದೆವ್ವವು - ಹಾ! ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು. ನೀನು ದೇವರು ಪ್ರತಿಷ್ಠಿಸಿದವನೇ ಎಂದು ಅಬ್ಬರಿಸಿ ಹೇಳಿತು.


ಪಾತಾಳದವರೆಗೆ ತೋಡಿಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು; ಸ್ವರ್ಗದ ತನಕ ಹತ್ತಿದರೇನು, ಅಲ್ಲಿಂದಲೂ ಅವರನ್ನಿಳಿಸುವೆನು;


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಮತ್ತು ಪಾತಾಳವು ಹೆಚ್ಚು ಆತುರದಿಂದ ಅಪಾರವಾಗಿ ಬಾಯಿತೆರೆಯಲು ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲಾ [ಅದರೊಳಗೆ] ಬಿದ್ದುಹೋಗುವವು.


ಪಾತಾಳಕ್ಕೂ ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ ಹಾಗೆ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.


ಪಾತಾಳವೂ ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಮತ್ತೂ ಸ್ಪಷ್ಟ.


ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತೀ; ಪಾತಾಳಕ್ಕೆ ಹೋಗಿ ಮಲಗಿಕೊಂಡೇನಂದರೆ ಅಲ್ಲಿಯೂ ನೀನಿರುವಿ.


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಆಹಾ, [ಆತನ ಜ್ಞಾನವು] ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು