Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:4 - ಕನ್ನಡ ಸತ್ಯವೇದವು J.V. (BSI)

4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:4
15 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಾಗಿ ಕೈಕೊಳ್ಳಬೇಕು. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಲೂ ಕೂಡದು; ಉಚ್ಚರಿಸಲೂ ಕೂಡದು.


ಉಳಿದಿರುವ ಈ ಜನಾಂಗಗಳ ಜೊತೆಯಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಲೂ ಪ್ರಮಾಣಮಾಡಲೂಬಾರದು, ಅವುಗಳಿಗೆ ಅಡ್ಡಬಿದ್ದು ಸೇವಿಸಲೂಬಾರದು.


ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.


ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವದು.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


[ಕೆಟ್ಟ ಸಂತಾನವೇ] ಹೊಳೆಯ ಗುಂಡುಗಳು ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೇ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು ಧಾನ್ಯದ್ರವ್ಯವನ್ನು ಅರ್ಪಿಸಿದ್ದೀ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಣಗಿಸಿಕೊಳ್ಳಲಾದೀತೇ?


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಆದರೆ ಯೆಹೋವನಾದ ನನ್ನನ್ನು ತೊರೆದು ನನ್ನ ಪವಿತ್ರಪರ್ವತವನ್ನು ಮರೆತು ಶುಭದಾಯಕದೇವತೆಗೆ ಔತಣವನ್ನು ಅಣಿಮಾಡಿ ಗತಿದಾಯಕದೇವತೆಗೆ ಮದ್ಯವನ್ನು ತುಂಬಾ ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗಮಾಡುವೆನು.


ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.


ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು