Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:43 - ಕನ್ನಡ ಸತ್ಯವೇದವು J.V. (BSI)

43 ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ I ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ I ನಾನರಿಯದ ಜನರನೂ ನನಗಧೀನರನ್ನಾಗಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು. ಆ ಜನಾಂಗಗಳಿಗೆ ನನ್ನನ್ನು ನಾಯಕನನ್ನಾಗಿ ಮಾಡು. ನನಗೆ ಗೊತ್ತಿಲ್ಲದವರೂ ನನ್ನ ಸೇವೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ; ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಮಾಡಿರುವಿರಿ. ನಾನು ಅರಿಯದ ಜನರು ನನಗೆ ವಿಧೇಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:43
21 ತಿಳಿವುಗಳ ಹೋಲಿಕೆ  

ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.


ಬಹುದಿವಸಗಳವರೆಗೆ ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡೆದಿತ್ತು. ದಾವೀದನು ಬಲಗೊಳ್ಳುತ್ತಾ ಬಂದನು, ಸೌಲನ ವಂಶವು ದುರ್ಬಲವಾಗುತ್ತಾ ಬಂದಿತು.


ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಾಯೆಲ್‍ಕುಲಗಳಲ್ಲೆಲ್ಲಾ ಜನರು ತಮ್ಮ ತಮ್ಮೊಳಗೆ ಜಗಳವಾಡಿ - ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.


ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆಯಾಗಿದ್ದೀರಿ; ಮೊದಲು ವಾತ್ಸಲ್ಯ ಹೊಂದಿರಲಿಲ್ಲ, ಈಗ ವಾತ್ಸಲ್ಯ ಹೊಂದಿದವರಾಗಿದ್ದೀರಿ.


ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವದಕ್ಕಾಗಿ ನನ್ನ ಕೈಯಿಂದ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಸೂಚಕಕಾರ್ಯ ಅದ್ಭುತಕಾರ್ಯಗಳ ಬಲದಿಂದಲೂ ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವದಕ್ಕೆ ನನಗೆ ಧೈರ್ಯಸಾಲದು.


ಮತ್ತೊಂದು ಸ್ಥಳದಲ್ಲಿ ಯೆಶಾಯನು ಹೇಳುವದೇನಂದರೆ - ಇಷಯನ ಅಂಕುರದವನು ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ; ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯ ಜಯಘೋಷ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು