Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:11 - ಕನ್ನಡ ಸತ್ಯವೇದವು J.V. (BSI)

11 ಅವುಗಳ ಮೂಲಕ ನಿನ್ನ ದಾಸನಿಗೆ ಎಚ್ಚರಿಕೆಯಾಗುತ್ತದೆ; ಅವುಗಳನ್ನು ಕೈಕೊಳ್ಳುವದರಿಂದ ಬಹಳ ಫಲ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ; ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ; ಅವುಗಳನ್ನು ಕೈಗೊಳ್ಳುವುದರಲ್ಲಿ ದೊಡ್ಡ ಪ್ರತಿಫಲವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:11
25 ತಿಳಿವುಗಳ ಹೋಲಿಕೆ  

ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.


ದೇವದರ್ಶಕರಿಲ್ಲದಿರುವಲ್ಲಿ ಜನರು ಅಂಕೆಮೀರುವರು; ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.


ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.


ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.


ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ಯೆಹೂದದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ ಅದು ನಿಮ್ಮ ಮುಂದೆ ಬರುವದಾದರೆ ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆಯೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆಯೂ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವದಾದರೆ ನೀವು ನಿರ್ದೋಷಿಗಳಾಗಿರುವಿರಿ.


ಆದರೆ ನೀನು ಪ್ರಾರ್ಥನೆಮಾಡಬೇಕಾದರೆ ನಿನ್ನ ಏಕಾಂತವಾದ ಕೋಣೆಯೊಳಗೆ ಹೋಗಿ ಬಾಗಲನ್ನು ಮುಚ್ಚಿಕೊಂಡು ಅಂತರಂಗದಲ್ಲಿಯೂ ಇರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ನೀನು ಉಸಿರಿದ ಧರ್ಮಶಾಸ್ತ್ರವು ಸಾವಿರಾರು ಚಿನ್ನಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.


ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ; ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವದೆಂದು ತಿಳಿದುಕೋ; ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಆಗ ಆತನು ನನಗೆ - ನರಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು