Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನೇ, ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ. ಯೆಹೋವನೇ, ನೀನೇ ನನ್ನ ಬಂಡೆಯಾಗಿರುವೆ. ನನ್ನನ್ನು ರಕ್ಷಿಸುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:14
21 ತಿಳಿವುಗಳ ಹೋಲಿಕೆ  

ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.


ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರ ಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು; ನಿನ್ನ ವಿಧಿಗಳನ್ನು ನನಗೆ ಕಲಿಸು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ನಾನಂತು ನನ್ನ ವಿಮೋಚಕನು ಜೀವಸ್ವರೂಪನೆಂದು ಬಲ್ಲೆನು; ಆತನು ಕಡೆಗೆ ದೂಳಿನ ಮೇಲೆ [ಸಾಕ್ಷಿಯಾಗಿ] ನಿಂತುಕೊಳ್ಳುವನು;


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ತಾನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳನ್ನು ಅಂಗೀಕಾರಮಾಡಿದ್ದೇ ಆ ಸಾಕ್ಷಿ. ಅವನು ಸತ್ತಿದ್ದರೂ ಅವನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ.


ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲ್ಯರ ಸದಮಲಸ್ವಾವಿು!


ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ನಿಮ್ಮ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ನಿಮಗೋಸ್ಕರ [ದೂತನನ್ನು] ಬಾಬೆಲಿಗೆ ಕಳುಹಿಸಿ ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯಿತರನ್ನಾಗಿ ಅಟ್ಟಿಬಿಡುವೆನು.


ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು