Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:5 - ಕನ್ನಡ ಸತ್ಯವೇದವು J.V. (BSI)

5 ಅನಂತರ ಆತನು ಸಿಟ್ಟಾಗಿ - ನಾನು ನೇವಿುಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5-6 ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5-6 “ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:5
15 ತಿಳಿವುಗಳ ಹೋಲಿಕೆ  

ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವದು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ನನ್ನನ್ನು ಎದುರಿಸಿ ಕೀಳುಮಾತಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲ ಇದೇ.


ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು