Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:4 - ಕನ್ನಡ ಸತ್ಯವೇದವು J.V. (BSI)

4 ಯಾವನು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ ಮೋಸಪ್ರಮಾಣಮಾಡದೆ ಶುದ್ಧಹಸ್ತವೂ ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:4
32 ತಿಳಿವುಗಳ ಹೋಲಿಕೆ  

ನಿರ್ಮಲಚಿತ್ತರು ಧನ್ಯರು; ಅವರು ದೇವರನ್ನು ನೋಡುವರು.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ದೇವರು ನಿರ್ಮಲಚಿತ್ತರಾದ ಇಸ್ರಾಯೇಲ್ಯರಿಗೆ ದಯಾಪರನೇ ಹೌದು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಯೆಹೋವನೇ, ನಾನು ನಿಷ್ಕಳಂಕನೆಂದು ಕೈಗಳನ್ನು ತೊಳೆದುಕೊಂಡವನಾಗಿ


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ ಭಕ್ತಿಪೂರ್ವಕವಾಗಿಯೇ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲು ಮಾಡಿದನು; ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲ ಕೊಟ್ಟನು.


ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿನ್ನದೆ ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ ನೆರೆಯವನ ಹೆಂಡತಿಯನ್ನು ಕೆಡಿಸದೆ


ನನ್ನ ಹೃದಯವನ್ನು ಶುದ್ಧಮಾಡಿಕೊಂಡಿದ್ದೇನೆ; ನನ್ನ ಪಾಪವನ್ನು ಕಳೆದುಕೊಂಡು ನಿರ್ಮಲನಾಗಿದ್ದೇನೆ ಎಂದು ಯಾರು ಹೇಳಬಲ್ಲರು?


ಯೆಹೋವನೇ, ನಿನ್ನಲ್ಲಿ ಮನಸ್ಸಿಟ್ಟಿದ್ದೇನೆ; ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ,


ನಾನು ಹಿಮದಿಂದ ಸ್ನಾನಮಾಡಿದರೂ ಚೌಳಿನಿಂದ ಕೈ ತೊಳಕೊಂಡರೂ


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಮನುಷ್ಯರ ಕೆಟ್ಟತನವು ಭೂವಿುಯ ಮೇಲೆ ಹೆಚ್ಚಾಗಿರುವದನ್ನೂ ಅವರು ಹೃದಯದಲ್ಲಿ ಯೋಚಿಸುವದೆಲ್ಲವು ಯಾವಾಗಲೂ ಬರೀ ಕೆಟ್ಟದ್ದಾಗಿರುವದನ್ನೂ


ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿನ್ನದೆ ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ ನೆರೆಯವನ ಹೆಂಡತಿಯನ್ನು ಕೆಡಿಸದೆ


ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ].


ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು